32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ, ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು
ಧರ್ಮಸ್ಥಳದಲ್ಲಿ ಸ್ವಚ್ಛತೆ, ಶಿಸ್ತು, ಅಚ್ಚುಕಟ್ಟು ಹಾಗೂ ಆತಿಥ್ಯದ ಬಗ್ಗೆ ಅಪಾರ ಸಂತಸ ಮತ್ತು ಶ್ಲಾಘನೆ ತಿಳಿಸಿದ್ದಾರೆ.

Related posts

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!