22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ. 28 ರಂದು ಕಾಲೇಜಿನ ಕನ್ನಡ ವಿಭಾಗದಿಂದ ಜಾನಪದ ವೈಭವ 2025 ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ.ರವರು ಉದ್ಘಾಟಿಸುವುದರ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಅಧ್ಯಾಪಕರಾದ ಡಾ. ಶರತ್ ಕುಮಾರ್ ಟಿ. ಕೆ.ಭಾಗವಹಿಸಿ ಮಾತನಾಡಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಮಾರುತಿ ಜಿ. ಇವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಪ್ರೊ. ಸುಧಾರಾಣಿ ಸ್ವಾಗತಿಸಿದರು. ಪ್ರೊ. ಪದ್ಮನಾಭ, ಪ್ರೊ. ರೊನಾಲ್ಡೊ ಪ್ರವೀಣ್ ಕೊರೆಯಾ ಅತಿಥಿಗಳಾಗಿ ಭಾಗವಹಿಸಿದ್ದರು.

ಜಾನಪದ ವೈಭವ- 2025 ಕಾರ್ಯಕ್ರಮದಲ್ಲಿ ಜನಪದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, 10 ತಂಡಗಳಲ್ಲಿ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಜಾನಪದ ಮೆರುಗನ್ನು ಮೆರೆಯುವ ಜನಪದ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸುಚಿತ್ರಾ ನಡೆಸಿಕೊಟ್ಟರು.

Related posts

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!