23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ, ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು
ಧರ್ಮಸ್ಥಳದಲ್ಲಿ ಸ್ವಚ್ಛತೆ, ಶಿಸ್ತು, ಅಚ್ಚುಕಟ್ಟು ಹಾಗೂ ಆತಿಥ್ಯದ ಬಗ್ಗೆ ಅಪಾರ ಸಂತಸ ಮತ್ತು ಶ್ಲಾಘನೆ ತಿಳಿಸಿದ್ದಾರೆ.

Related posts

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya
error: Content is protected !!