23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ, ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು
ಧರ್ಮಸ್ಥಳದಲ್ಲಿ ಸ್ವಚ್ಛತೆ, ಶಿಸ್ತು, ಅಚ್ಚುಕಟ್ಟು ಹಾಗೂ ಆತಿಥ್ಯದ ಬಗ್ಗೆ ಅಪಾರ ಸಂತಸ ಮತ್ತು ಶ್ಲಾಘನೆ ತಿಳಿಸಿದ್ದಾರೆ.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya
error: Content is protected !!