23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಬಂದಾರು: ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟ ಬಂದಾರು ಇದರ ವಾರ್ಷಿಕ ಮಹಾಸಭೆ ಮಾ. 28 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಿತ್ರರವರು ಅಧ್ಯಕ್ಷತೆ ವಹಿಸಿದ್ದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷ ಪುಷ್ಪಾವತಿ ಬರಮೇಲು, ಸದಸ್ಯರಾದ ಅನಿತಾ ಉದಯ ಕುರುಡಂಗೆ, ಭಾರತಿ ಕೊಡಿಯೇಲು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾಶ್ರೀ, ಪದಾಧಿಕಾರಿಗಳಾದ ಸುರೇಖಾ, ಉಷಾ, ಪುಷ್ಪಾವತಿ, ಶೀಲಾವತಿ, ಭವ್ಯ, ತೀರ್ಥಶ್ರೀ,ಸುಚಿತ್ರ, ಗೀತಾ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಮಹಾಸಭೆಯ ಬಗ್ಗೆ ಮತ್ತು ಸಂಜೀವಿನಿಯ ಧ್ಯೇಯ ಉದ್ದೇಶಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಂ.ಬಿ.ಕೆ ಭಾಗ್ಯಶ್ರೀ ಯವರು 2023 -24ರ ವಾರ್ಷಿಕ ವರದಿಯನ್ನು ಮಂಡನೆ ಮಾಡಿದರು. ಸಂಘದ ಸದಸ್ಯರಿಂದ ಅನುಮೋದನೆ ಪಡೆಯಲಾಯಿತು. 2023-24ರ ಜಮಾ ಮತ್ತು ಖರ್ಚಿನ ಬಗ್ಗೆ ಎಲ್.ಸಿ.ಆರ್.ಪಿ ಯಾದ ಹರ್ಷಿಣಿ ಯವರು ವರದಿ ಮಾಡಿದರು. ಅತ್ಯುತ್ತಮ ಸಂಘವನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು. ಮಹಾಸಭೆಗೆ ಅತೀಹೆಚ್ಚು ಸದಸ್ಯರು ಭಾಗವಹಿಸಿದ 4 ಸಂಜೀವಿನಿ ಸ್ವಸಹಾಯ ಸಂಘಕ್ಕೆ ಸ್ಮರಣಿಕೆ ನೀಡಲಾಯಿತು. ಹಳೆ ಪದಾಧಿಕಾರಿಗಳಿಂದ ಹೊಸ ಪದಾಧಿಕಾರಿಗಳಿಗೆ ದಾಖಲಾತಿ ಹಸ್ತಾಂತರ ಮಾಡಿ ಪದಗ್ರಹಣ ಮಾಡಲಾಯಿತು. ಬೀಳ್ಕೊಟ್ಟ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಹಾಗೂ ಮಾಜಿ ಎಂ.ಬಿ.ಕೆ ಗೆ ಗೌರವ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಅದೇ ರೀತಿ ಶೀಲಾವತಿಯವರನ್ನು ಸನ್ಮಾನ ಮಾಡಲಾಯಿತು.

ಲಕ್ಷ್ಮೀ ಸ್ವಾಗತಿಸಿದರು. ಶ್ರೀಮತಿ ಭಾಗ್ಯಶ್ರೀ ಎಂ.ಬಿ.ಕೆ ನಿರೂಪಿಸಿದರು. ಶ್ರೀಮತಿ ಚಂದ್ರಿಕಾ ವಂದಿಸಿದರು. ಮಹಾಸಭೆಯ ಉಸ್ತುವಾರಿಯನ್ನು ಎಲ್.ಸಿ.ಆರ್. ಪಿ ಯಾದ ಪವಿತ್ರ ವಹಿಸಿದ್ದರು.

Related posts

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya
error: Content is protected !!