23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯೊಬ್ಬಳು ತನ್ನನ್ನು ತಾನು ತೊಡಗಿಸಿಕೊಂಡರೆ ಯಾವುದೇ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯವನ್ನು ಮಾಡುತ್ತಿರುವ ನಮ್ಮ ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜವು ಇಂದು ತಾಲೂಕಿನಲ್ಲಿ ಗುರುತಿಸುವಂತಾಗಿದೆ. ನಾವೆಲ್ಲರೂ ಆದರ್ಶ ಸಾಧಕ ಮಹಿಳೆರಾದಾಗ ಮಾತ್ರ ಸಮಾಜ ನಮ್ಮನ್ನು ಗುರುತಿಸಿ ಗೌರವಿಸುತ್ತದೆ. ಅಂತಹ ಗುರುತರವಾದ ಕಾರ್ಯಕ್ಕೆ ನಾವೆಲ್ಲ ಜೊತೆಯಾಗಿ ಕಾರ್ಯವನ್ನು ಮಾಡಬೇಕು ಎಂದು ವಿಶ್ವ ಮಹಿಳಾ ದಿನಾಚರಣೆಯನ್ನು ದೀಪ ಪ್ರಜ್ವಲನದೊಂದಿಗೆ ಉದ್ಘಾಟಿಸಿದ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಅಭಿಯಂತರರಾಗಿದ್ದ ಚಂದ್ರರಾಜ್ ಜೈನ್ ಇವರ ಪತ್ನಿ ಶ್ರೀಮತಿ ಸುಜಯ ಸಿ ಜೈನ್ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ನ್ಯಾಯವಾದಿ ಶ್ರೀಮತಿ ಸ್ವರ್ಣಲತಾ ಜೈನ್ ರವರು “ಇಂದಿನ ಸಮಾಜದಲ್ಲಿ ಮಹಿಳೆಯರ ಮುಂದಿರುವ ಸವಾಲುಗಳು, ಅದನ್ನು ನಿಭಾಯಿಸಬೇಕಾದ ತಂತ್ರಗಾರಿಕೆ, ಮಹಿಳೆಯರಿಗೆ ಪರವಾಗಿರುವ ಕಾನೂನುಗಳು, ಪೋಕ್ಸೋ ಕಾಯ್ದೆಯ ಮಹತ್ವ ಇತ್ಯಾದಿ ವಿಚಾರಗಳನ್ನು ಎಳೆ ಎಳೆಯಾಗಿ ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು. ಆಗ ಮಾತ್ರ ಸುಸ್ತಿರ ಸಮಾಜವನ್ನು ಕಟ್ಟಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಪೂರ್ವ ಪರಂಪರೆಯಲ್ಲಿ ಸಾಧನೆಗೈದ ಹಲವಾರು ಜೈನ ಮಹಿಳಾ ಸಾಧಕೀಯರಲ್ಲಿ ಕೆಲವರ ಸಾಧನೆಯ ತುಣುಕನ್ನು ಸಭೆಯಲ್ಲಿ ಪರಿಚಯಿಸಲಾಯಿತು. ಕಾಳು ಮೆಣಸಿನ ರಾಣಿ ಚೆನ್ನಬೈರಾ ದೇವಿ ಇವರನ್ನು ಶ್ರೀಮತಿ ಉಷಾ ಹಾಗೂ ಜೈನ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಜೈನ ಮಹಿಳೆ ಬಿರುದಾಂಕಿತ ಶ್ರೀಮತಿ ರಾಧಮ್ಮ ಇವರ ಬಗ್ಗೆ ಶ್ರೀಮತಿ ಸುರಕ್ಷಿತ ರವರು ಸಭೆಗೆ ಪರಿಚಯಿಸಿದರು.

ಶಾಂತಿಶ್ರೀ ತಂಡದಿಂದ ವಲಯ ಮಟ್ಟದ ಜಿನಭಜನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಾಲ್ಕು ತಂಡಗಳನ್ನು ವಿಶೇಷ ರೀತಿಯಲ್ಲಿ ಗೌರವಿಸಲಾಯಿತು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿರುವ ಪ್ರೊ| ತ್ರಿಶಾಲ ಜೈನ್ ಕೆ ಎಸ್ ಇವರು “ಹತ್ತನೇ ಶತಮಾನದಿಂದ 21ನೇ ಶತಮಾನದವರೆಗೆ ದೇಶದ ನಾನಾ ಭಾಗಗಳಲ್ಲಿ ಆಳ್ವಿಕೆ ಮಾಡಿರುವ ಜೈನ ರಾಣಿಯರ ಧೈರ್ಯ, ಸಾಹಸ, ಚಾಣಕ್ಯತನ, ಆಡಳಿತ ಶೈಲಿ ಮುಂತಾದ ವಿಚಾರಗಳನ್ನು ನೆನಪಿಸಿಕೊಂಡರು. ಇಂದು ವಿಶ್ವದಲ್ಲಿ ಮಹಿಳೆಯರ ಸ್ಥಾನಮಾನ ಹಾಗೂ ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಸಾಧಿಸುತ್ತಿರುವ ಸಾಧನೆಗಳು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಮಾತ್ರವಲ್ಲದೆ ಇತ್ತೀಚೆಗೆ ಬಾಹ್ಯಾಕಾಶ ಯಾನವನ್ನು ಮಾಡಿ ಯಶಸ್ವಿಯಾಗಿ ಧರೆಗೆ ಬಂದಿಳಿದ ಸುನಿತಾ ವಿಲಿಯಮ್ಸ್ ಇವರ ಅದ್ಭುತ ಪೂರ್ವ ಸಾಧನೆಗೆ ಸಂಸ್ಥೆಯ ವತಿಯಿಂದ ವಿಶೇಷ ಅಭಿನಂದನೆಯನ್ನು ಸಲ್ಲಿಸಲಾಯಿತು.


ಕಾರ್ಯಕ್ರಮವು ಶ್ರೀಮತಿ ಸ್ವಪ್ನ ಬಳಗದವರು ಪ್ರಾರ್ಥಿಸಿ, ಸಂಸ್ಥೆ ನಡೆದು ಬಂದ ದಾರಿಯ ಕುರಿತು ಸಂಸ್ಥೆಯ ಕಾರ್ಯದರ್ಶಿ, ಶ್ರೀಮತಿ ರಾಜಶ್ರೀ ಪ್ರಸ್ತಾಪಿಸಿದರೆ, ಶ್ರೀಮತಿ ಗುಣಮ್ಮ ಪಿ ಜೈನ್ ಸ್ವಾಗತಿಸಿ, ಶ್ರೀಮತಿ ತ್ರಿಶಾಲ ಅತಿಕಾರಿ ವಂದಿಸಿ, ಶ್ರೀಮತಿ ಅನುಪ ಕುಮಾರಿ ಮಾರಿ ಸಂಘಟಿಸಿ, ಶ್ರೀಮತಿ ದವಳ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya
error: Content is protected !!