25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ. 28 ರಂದು ಕಾಲೇಜಿನ ಕನ್ನಡ ವಿಭಾಗದಿಂದ ಜಾನಪದ ವೈಭವ 2025 ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ.ರವರು ಉದ್ಘಾಟಿಸುವುದರ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಅಧ್ಯಾಪಕರಾದ ಡಾ. ಶರತ್ ಕುಮಾರ್ ಟಿ. ಕೆ.ಭಾಗವಹಿಸಿ ಮಾತನಾಡಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಮಾರುತಿ ಜಿ. ಇವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಪ್ರೊ. ಸುಧಾರಾಣಿ ಸ್ವಾಗತಿಸಿದರು. ಪ್ರೊ. ಪದ್ಮನಾಭ, ಪ್ರೊ. ರೊನಾಲ್ಡೊ ಪ್ರವೀಣ್ ಕೊರೆಯಾ ಅತಿಥಿಗಳಾಗಿ ಭಾಗವಹಿಸಿದ್ದರು.

ಜಾನಪದ ವೈಭವ- 2025 ಕಾರ್ಯಕ್ರಮದಲ್ಲಿ ಜನಪದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, 10 ತಂಡಗಳಲ್ಲಿ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಜಾನಪದ ಮೆರುಗನ್ನು ಮೆರೆಯುವ ಜನಪದ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸುಚಿತ್ರಾ ನಡೆಸಿಕೊಟ್ಟರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!