22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ. 28 ರಂದು ಕಾಲೇಜಿನ ಕನ್ನಡ ವಿಭಾಗದಿಂದ ಜಾನಪದ ವೈಭವ 2025 ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ.ರವರು ಉದ್ಘಾಟಿಸುವುದರ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಅಧ್ಯಾಪಕರಾದ ಡಾ. ಶರತ್ ಕುಮಾರ್ ಟಿ. ಕೆ.ಭಾಗವಹಿಸಿ ಮಾತನಾಡಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಮಾರುತಿ ಜಿ. ಇವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಪ್ರೊ. ಸುಧಾರಾಣಿ ಸ್ವಾಗತಿಸಿದರು. ಪ್ರೊ. ಪದ್ಮನಾಭ, ಪ್ರೊ. ರೊನಾಲ್ಡೊ ಪ್ರವೀಣ್ ಕೊರೆಯಾ ಅತಿಥಿಗಳಾಗಿ ಭಾಗವಹಿಸಿದ್ದರು.

ಜಾನಪದ ವೈಭವ- 2025 ಕಾರ್ಯಕ್ರಮದಲ್ಲಿ ಜನಪದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, 10 ತಂಡಗಳಲ್ಲಿ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಜಾನಪದ ಮೆರುಗನ್ನು ಮೆರೆಯುವ ಜನಪದ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸುಚಿತ್ರಾ ನಡೆಸಿಕೊಟ್ಟರು.

Related posts

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya
error: Content is protected !!