September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶುಭಾರಂಭ

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

ಬೆಳ್ತಂಗಡಿ: ಶ್ರೀ ಕ್ಚೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾರ್ಶೀವಾದಗಳೊಂದಿಗೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆಯ ನೂತನ ಶಾಖೆ ವಾಮದಪದವಿನ ಕಲಸಡ್ಕ ಕಾಂಪ್ಲೆಕ್ಸ್ ನಲ್ಲಿ ಮಾ.30 ರಂದು ಶುಭಾರಂಭಗೊಂಡಿತು.

ಉಜಿರೆ ಲಕ್ಷ್ಮೀ ಇಂಡಸ್ಟೀಸ್ ಕನಸಿನ ಮನೆ ವಾಮದಪದವು ಶಾಖೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಿ ಮೋಹನ್ ಕುಮಾರ್ ಅವರು ಪ್ರತಿಭೆಯುಳ್ಳ ವ್ಯಕ್ತಿ. ಉದ್ಯಮದೊಂದಿಗೆ ಸಮಾಜಮುಖಿಯಾಗಿ ತೊಡಗಿಸಿಕೊಂಡಿರುವ ಮೋಹ‌ನ್ ಕುಮಾರ್ ಅವರ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳಗಲಿ ಎಂದರು.

ಶಾಸಕ ಹರೀಶ್ ಪೂಂಜ ಮಾತನಾಡಿ ಕಳೆದ ಹಲವು ದಶಕಗಳಿಂದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಯು ಸಮಾಜದಲ್ಲಿ ಬೆಳೆಯುತ್ತ ಬಂದಿದ್ದು ನೂರಾರು ಮಂದಿಗೆ ಉದ್ಯೋಗವಕಾಶ ಕಲ್ಪಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಸ್ಥೆಯಾಗಿ ಬೆಳೆದಿದೆ ಎಂದರು.

ವಿಧಾನ ಪರಿಷತ್ ಶಾಸಕ ಕೆ‌.ಪ್ರತಾಪಸಿಂಹ ನಾಯಕ್ ಮಾತನಾಡಿ
ಕನಸಿನ ಮನೆ ಲಕ್ಷ್ಮೀ ಇಂಡಸ್ಟ್ರೀಸ್ ನೆರೆಯ ಬಂಟ್ವಾಳ ತಾಲೂಕಿನ ವಾಮದಪದವಿಲ್ಲಿ ಶಾಖೆ ತೆರೆದಿದ್ದು ಇಲ್ಲಿನ ಜನರು ಮೋಹನ್ ಕುಮಾರ್ ರವರಿಗೆ ಆಶೀರ್ವಾದ ಮಾಡಬೇಕು ಎಂದರು.

ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಮಾತನಾಡಿ ಗ್ರಾಹಕರ ಕನಸಿನ ಮನೆಗೆ ಸೌಂದರ್ಯಧ ಸ್ಪರ್ಶ ನೀಡಲು ಮೋಹನ್ ಕುಮಾರ್ ಅವರ ಲಕ್ಷ್ಮೀ ಇಂಡಸ್ಟ್ರೀಸ್ ಸಂಸ್ಥೆ ಸಜ್ಜಾಗಿದೆ ಎಂದರು.

ವೇದಿಕೆಯಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ,ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿ ಜಿ.ಕೆ.ಭಟ್,ಗುತ್ತಿಗೆದಾರ ಅಮ್ಮು ರೈ ಹರ್ಕಾಡಿ ಹಾಗೂ ಚೆನೈತೊಡಿ ಗ್ರಾ.ಪಂ. ಅಧ್ಯಕ್ಷೆ ವನಿತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ಹಾಗೂ ರೇಶ್ಮಾ ಮೋಹನ್ ಕುಮಾರ್,ತಾಯಿ ಲೀಲಾವತಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya
error: Content is protected !!