ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ ಸುಧಾಕರ್ ರವರ ಸಮ್ಮುಖದಲ್ಲಿ ಸ್ನಾತಕೋತ್ತರ ಎಂ.ಬಿ.ಎ ಪದವಿಯಲ್ಲಿ ರಾಜ್ಯಮಟ್ಟದಲ್ಲಿ ಆರನೇ ರ್ಯಾಂಕ್ ಹಾಗೂ ಎಂ.ಬಿ.ಎ ಸ್ಪೆಷಲೈಶನ್ ಪದವಿಯಲ್ಲಿ ಶ್ರೀಮತಿ ಉಮಾವತಿ ರುಕ್ಮಯ ಗೌಡ ನಡ ರವರು ಪ್ರಥಮ ರ್ಯಾಂಕ್ ಗಳಿಸಿ, ಪದವಿ ಪ್ರಶಸ್ತಿ ಹಾಗೂ ನಗದು ಪುರಸ್ಕಾರವನ್ನು ಸ್ವೀಕರಿಸಿದರು.
ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಳ್ತಂಗಡಿ ದಾಸರಬೆಟ್ಟು ಮನೆಯ ದಿl ಮುತ್ತಪ್ಪ ಗೌಡ ಹಾಗೂ ಬಾಲಕ್ಕ ದಂಪತಿ ಪುತ್ರಿ.