July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

ಬೆಳ್ತಂಗಡಿ: ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ದಿ| ಅಣ್ಣಿ ಆಚಾರ್ಯ ಮತ್ತು ಶ್ರೀಮತಿ ವಿನೋದ ಆಚಾರ್ಯ ದಂಪತಿ ಪುತ್ರ,ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ಅಂಡಿಂಜೆ (40ವ) ರವರು ಮಾ.31ರಂದು ಇಂದು ಮುಂಜಾನೆ 4 ಗಂಟೆಗೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.


ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್‌ನಲ್ಲಿ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ.

ಮೃತರು ತಾಯಿ, ಸಹೋದರಿ, ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya
error: Content is protected !!