July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

ಕಿಲ್ಲೂರು: ಇತಿಹಾಸ ಪ್ರಸಿದ್ಧವಾದ ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.


ಸಂಶೀರ್ ಸಖಾಫಿ ಪರಪ್ಪು ಈದುಲ್ ಫಿತ್ರ್ ನ ಸಂದೇಶ ಭಾಷಣ ಮಾಡಿ ಈದ್ ನಮಾಝ್ ಗೆ ನೇತೃತ್ವ ನೀಡಿದರು. ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀ ಝುಹ್ರಿ ರವರು ಅಸಂಶ ಭಾಷಣ ಮಾಡಿ ಶುಭಹಾರೈಸುದರೊಂದಿಗೆ ಮಾದಕ ದ್ರವ್ಯದ ಬಗ್ಗೆ ಯುವಕರಿಗೆ ಜಾಗೃತಿ ಮೂಡಿಸಿದರು.


ವರ್ಷಗಳ ಕಾಲ ಸೇವೆ ಮಾಡಿ ನಿರ್ಗಮಿಸುತ್ತಿರುವ ಸಂಶೀರ್ ಸಖಾಫಿ ಪರಪ್ಪು, ರಶೀದ್ ಮದನಿ ಇಂದಬೆಟ್ಟು, ಅಬ್ದುಲ್ ಸತ್ತಾರ್ ಸಖಾಫಿ ಯವರನ್ನು ಜಮಾಅತ್ ನವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಅದೇ ರೀತಿ ಪವಿತ್ರ ರಮಲಾನ್ ನಲ್ಲಿ 30 ದಿನಗಳು ತರವೀಹ್ ಮತ್ತು ಸುಬುಹಿ ನಮಾಝ್ ಗೆ ಬರುತ್ತಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಜಮಾಅತ್ ಅಧ್ಯಕ್ಷರ ವತಿಯಿಂದ ಸೈಕಲ್ ನೀಡಿ ಮಕ್ಕಳನ್ನು ಗೌರವಿಸಿದ್ದು ವಿಶೇಷವಾಗಿತ್ತು.


ಆಡಳಿತ ಕಮಿಟಿಯ ಉಪಾಧ್ಯಕ್ಷ ಸಾಹುಲ್ ಹಮೀದ್, ಕಾರ್ಯದರ್ಶಿ ಸಾಹುಲ್ , ಕೋಶಾಧಿಕಾರಿ ಮಲ್ಲಿಗೆ ಅಬೂಬಕ್ಕರ್, ಸದಸ್ಯರಾದ ಮುಹಮ್ಮದ್ ಎಮ್, ಹಂಝತ್ ಕಿಲ್ಲೂರು, ಹೆಚ್.ಎನ್ ಹನೀಫ್, ಬದ್ರುದ್ದೀನ್, ಮುಹಮ್ಮದ್ ಮಣ್ಣಗುಂಡಿ, ಅಶ್ರಫ್ ಶ್ರವಣಗುಂಡ, ಹನೀಫ್ ಮಲ್ಲಿಗೆ ಹಾಗೂ ಹಿರಿಯರಾದ ಕಾಸಿಮ್ ಮಲ್ಲಿಗೆ ಮನೆ, ಇಸ್ಮಾಯಿಲ್ ಫೈಝಿ, ಬಿಹೆಚ್ ಅಬೂಬಕ್ಕರ್ ಹಾಜಿ ಹಾಗೂ ಜಮಾಅತ್ ಹಿರಿಯರು, ಯುವಕರು, ಮಕ್ಕಳು ಭಾಗವಹಿಸಿ ಲೋಕ ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು.

Related posts

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya
error: Content is protected !!