25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

ಕಿಲ್ಲೂರು: ಇತಿಹಾಸ ಪ್ರಸಿದ್ಧವಾದ ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.


ಸಂಶೀರ್ ಸಖಾಫಿ ಪರಪ್ಪು ಈದುಲ್ ಫಿತ್ರ್ ನ ಸಂದೇಶ ಭಾಷಣ ಮಾಡಿ ಈದ್ ನಮಾಝ್ ಗೆ ನೇತೃತ್ವ ನೀಡಿದರು. ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀ ಝುಹ್ರಿ ರವರು ಅಸಂಶ ಭಾಷಣ ಮಾಡಿ ಶುಭಹಾರೈಸುದರೊಂದಿಗೆ ಮಾದಕ ದ್ರವ್ಯದ ಬಗ್ಗೆ ಯುವಕರಿಗೆ ಜಾಗೃತಿ ಮೂಡಿಸಿದರು.


ವರ್ಷಗಳ ಕಾಲ ಸೇವೆ ಮಾಡಿ ನಿರ್ಗಮಿಸುತ್ತಿರುವ ಸಂಶೀರ್ ಸಖಾಫಿ ಪರಪ್ಪು, ರಶೀದ್ ಮದನಿ ಇಂದಬೆಟ್ಟು, ಅಬ್ದುಲ್ ಸತ್ತಾರ್ ಸಖಾಫಿ ಯವರನ್ನು ಜಮಾಅತ್ ನವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಅದೇ ರೀತಿ ಪವಿತ್ರ ರಮಲಾನ್ ನಲ್ಲಿ 30 ದಿನಗಳು ತರವೀಹ್ ಮತ್ತು ಸುಬುಹಿ ನಮಾಝ್ ಗೆ ಬರುತ್ತಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಜಮಾಅತ್ ಅಧ್ಯಕ್ಷರ ವತಿಯಿಂದ ಸೈಕಲ್ ನೀಡಿ ಮಕ್ಕಳನ್ನು ಗೌರವಿಸಿದ್ದು ವಿಶೇಷವಾಗಿತ್ತು.


ಆಡಳಿತ ಕಮಿಟಿಯ ಉಪಾಧ್ಯಕ್ಷ ಸಾಹುಲ್ ಹಮೀದ್, ಕಾರ್ಯದರ್ಶಿ ಸಾಹುಲ್ , ಕೋಶಾಧಿಕಾರಿ ಮಲ್ಲಿಗೆ ಅಬೂಬಕ್ಕರ್, ಸದಸ್ಯರಾದ ಮುಹಮ್ಮದ್ ಎಮ್, ಹಂಝತ್ ಕಿಲ್ಲೂರು, ಹೆಚ್.ಎನ್ ಹನೀಫ್, ಬದ್ರುದ್ದೀನ್, ಮುಹಮ್ಮದ್ ಮಣ್ಣಗುಂಡಿ, ಅಶ್ರಫ್ ಶ್ರವಣಗುಂಡ, ಹನೀಫ್ ಮಲ್ಲಿಗೆ ಹಾಗೂ ಹಿರಿಯರಾದ ಕಾಸಿಮ್ ಮಲ್ಲಿಗೆ ಮನೆ, ಇಸ್ಮಾಯಿಲ್ ಫೈಝಿ, ಬಿಹೆಚ್ ಅಬೂಬಕ್ಕರ್ ಹಾಜಿ ಹಾಗೂ ಜಮಾಅತ್ ಹಿರಿಯರು, ಯುವಕರು, ಮಕ್ಕಳು ಭಾಗವಹಿಸಿ ಲೋಕ ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು.

Related posts

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya
error: Content is protected !!