25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು.

ಧರ್ಮ ಗುರುಗಳಾದ ಖತೀಬ್ ನೌಷಾದ್ ಸಖಾಫಿ ಈದ್ ಸಂದೇಶ ಪ್ರವಚನ ನೀಡಿದರು. ನಂತರ ಸಾಮೂಹಿಕ ಈದ್ ನಮಾಝ್ ಮಾಡಿ. ಅಲ್ಲಾಹನ ಸ್ಮರಣೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಈದ್ ಎಂದರೆ ಹಬ್ಬ, ಫಿತರ್ ಎಂಬುದು ದಾನದ ಸಂಕೇತವಾಗಿದೆ. ಹೀಗಾಗಿ ರಂಜಾನ್ ದಾನ-ಧರ್ಮಗಳ ಹಬ್ಬ. ವರ್ಷದೊಳಗೆ ದುಡಿದ ಹಣದಲ್ಲಿ ಒಂದಿಷ್ಟನ್ನು ಸಮುದಾಯದ ಉಳ್ಳವರು ಬಡವರಿಗೆ ದಾನ ಮಾಡಿದರು.

ಕಳೆದ ಒಂದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸಿದ ನೌಷಾದ್ ಸಖಾಫಿಯರವರನ್ನು ಬಿಳ್ಕೊಡಲಾಯಿತು. ರಿಫಾಯ್ಯಾ ಜುಮಾ ಮಸೀದಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು, ಎಸ್.ಎಸ್.ಎಫ್ ಬೆದ್ರಬೆಟ್ಟು ಯೂನಿಟ್ ಪದಾಧಿಕಾರಿಗಳು, ಎಸ್.ವೈ.ಎಸ್ ಪದಾಧಿಕಾರಿಗಳು, ಆಡಳಿತ ಸಮಿತಿ ಪದಾಧಿಕಾರಿಗಳು, ಯುನೈಟೆಡ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಜಮಾತ್ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ಆಡಳಿತ ಸಮಿತಿ ಕಾರ್ಯದರ್ಶಿ ಮುಸ್ತಫಾ ಧನ್ಯವಾದ ನೆರವೇರಿಸಿದರು.

Related posts

ನಾವೂರು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya
error: Content is protected !!