25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು.

ಧರ್ಮ ಗುರುಗಳಾದ ಖತೀಬ್ ನೌಷಾದ್ ಸಖಾಫಿ ಈದ್ ಸಂದೇಶ ಪ್ರವಚನ ನೀಡಿದರು. ನಂತರ ಸಾಮೂಹಿಕ ಈದ್ ನಮಾಝ್ ಮಾಡಿ. ಅಲ್ಲಾಹನ ಸ್ಮರಣೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಈದ್ ಎಂದರೆ ಹಬ್ಬ, ಫಿತರ್ ಎಂಬುದು ದಾನದ ಸಂಕೇತವಾಗಿದೆ. ಹೀಗಾಗಿ ರಂಜಾನ್ ದಾನ-ಧರ್ಮಗಳ ಹಬ್ಬ. ವರ್ಷದೊಳಗೆ ದುಡಿದ ಹಣದಲ್ಲಿ ಒಂದಿಷ್ಟನ್ನು ಸಮುದಾಯದ ಉಳ್ಳವರು ಬಡವರಿಗೆ ದಾನ ಮಾಡಿದರು.

ಕಳೆದ ಒಂದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸಿದ ನೌಷಾದ್ ಸಖಾಫಿಯರವರನ್ನು ಬಿಳ್ಕೊಡಲಾಯಿತು. ರಿಫಾಯ್ಯಾ ಜುಮಾ ಮಸೀದಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು, ಎಸ್.ಎಸ್.ಎಫ್ ಬೆದ್ರಬೆಟ್ಟು ಯೂನಿಟ್ ಪದಾಧಿಕಾರಿಗಳು, ಎಸ್.ವೈ.ಎಸ್ ಪದಾಧಿಕಾರಿಗಳು, ಆಡಳಿತ ಸಮಿತಿ ಪದಾಧಿಕಾರಿಗಳು, ಯುನೈಟೆಡ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಜಮಾತ್ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ಆಡಳಿತ ಸಮಿತಿ ಕಾರ್ಯದರ್ಶಿ ಮುಸ್ತಫಾ ಧನ್ಯವಾದ ನೆರವೇರಿಸಿದರು.

Related posts

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya
error: Content is protected !!