September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು.

ಧರ್ಮ ಗುರುಗಳಾದ ಖತೀಬ್ ನೌಷಾದ್ ಸಖಾಫಿ ಈದ್ ಸಂದೇಶ ಪ್ರವಚನ ನೀಡಿದರು. ನಂತರ ಸಾಮೂಹಿಕ ಈದ್ ನಮಾಝ್ ಮಾಡಿ. ಅಲ್ಲಾಹನ ಸ್ಮರಣೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಈದ್ ಎಂದರೆ ಹಬ್ಬ, ಫಿತರ್ ಎಂಬುದು ದಾನದ ಸಂಕೇತವಾಗಿದೆ. ಹೀಗಾಗಿ ರಂಜಾನ್ ದಾನ-ಧರ್ಮಗಳ ಹಬ್ಬ. ವರ್ಷದೊಳಗೆ ದುಡಿದ ಹಣದಲ್ಲಿ ಒಂದಿಷ್ಟನ್ನು ಸಮುದಾಯದ ಉಳ್ಳವರು ಬಡವರಿಗೆ ದಾನ ಮಾಡಿದರು.

ಕಳೆದ ಒಂದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸಿದ ನೌಷಾದ್ ಸಖಾಫಿಯರವರನ್ನು ಬಿಳ್ಕೊಡಲಾಯಿತು. ರಿಫಾಯ್ಯಾ ಜುಮಾ ಮಸೀದಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು, ಎಸ್.ಎಸ್.ಎಫ್ ಬೆದ್ರಬೆಟ್ಟು ಯೂನಿಟ್ ಪದಾಧಿಕಾರಿಗಳು, ಎಸ್.ವೈ.ಎಸ್ ಪದಾಧಿಕಾರಿಗಳು, ಆಡಳಿತ ಸಮಿತಿ ಪದಾಧಿಕಾರಿಗಳು, ಯುನೈಟೆಡ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಜಮಾತ್ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ಆಡಳಿತ ಸಮಿತಿ ಕಾರ್ಯದರ್ಶಿ ಮುಸ್ತಫಾ ಧನ್ಯವಾದ ನೆರವೇರಿಸಿದರು.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!