23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಖುತುಬಾ ಪಾರಾಯಣ ಮತ್ತು ಚೆರಿಯ ಪೆರ್ನಾಲ್ ನಮಾಝ್ ಗೆ ನೇತೃತ್ವ ನೀಡಿದರು. ಉಸ್ತಾದ್ ತ್ವಾಹಿರ್ ಸ‌ಅದಿ ತಕ್ಬೀರ್ ಗೆ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷ ಬಶೀರ್ ನೆಕ್ಕರೆ ಸಹಿತ ಆಡಳಿತ ಸಮಿತಿ ಪದಾಧಿಕಾರಿಗಳು, ಜಮಾಅತ್ ನ ಸರ್ವ ಸದಸ್ಯರು ಭಾಗವಹಿಸಿದ್ದರು. ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್ ಉಪಸ್ಥಿತರಿದ್ದರು.

ಈ ವೇಳೆ ಪ್ರಸ್ತುತ ಸಾಲಿನ ಆಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 5 ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಉಜಿರೆ ರೇಂಜ್ ಮಟ್ಟದ 19 ಮದರಸಗಳ ಪೈಕಿ ಪ್ರಥಮ ಸ್ಥಾನ ಪಡೆದ ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್ ಅವರನ್ನು ಶಾಲು ಹೊದಿಸಿ ನಗದು ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ಎಲ್ಲಾ ತರಾವೀಹ್ ಹಾಗೂ ಹದ್ದಾದ್ ಗೆ ಆಗಮಿಸಿದ ವಿದ್ಯಾರ್ಥಿಗಳಾದ ಸುಜಾಹ್ ಮತ್ತು ಶಿಸ್ತು ಪಾಲಿಸಿದ ಮರ್ವಾನ್ ಅವರಿಗೆ ಅಧ್ಯಕ್ಷರ ವತಿಯಿಂದ ನಗದು ಪುರಸ್ಕಾರ ನೀಡಲಾಯಿತು.
ವಿಶ್ವ ಶಾಂತಿಗೆ ಸಾಮೂಹಿಕ ಪ್ರಾರ್ಥನೆ, ಮರಣ ಹೊಂದಿದವರ ಸ್ಮರಣೆ ಹಾಗೂ ಹಬ್ಬದ ಸಂದೇಶವನ್ನು ಮುಖ್ಯ ಗುರುಗಳು ನಡೆಸಿಕೊಟ್ಟರು.

Related posts

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya
error: Content is protected !!