September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಖುತುಬಾ ಪಾರಾಯಣ ಮತ್ತು ಚೆರಿಯ ಪೆರ್ನಾಲ್ ನಮಾಝ್ ಗೆ ನೇತೃತ್ವ ನೀಡಿದರು. ಉಸ್ತಾದ್ ತ್ವಾಹಿರ್ ಸ‌ಅದಿ ತಕ್ಬೀರ್ ಗೆ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷ ಬಶೀರ್ ನೆಕ್ಕರೆ ಸಹಿತ ಆಡಳಿತ ಸಮಿತಿ ಪದಾಧಿಕಾರಿಗಳು, ಜಮಾಅತ್ ನ ಸರ್ವ ಸದಸ್ಯರು ಭಾಗವಹಿಸಿದ್ದರು. ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್ ಉಪಸ್ಥಿತರಿದ್ದರು.

ಈ ವೇಳೆ ಪ್ರಸ್ತುತ ಸಾಲಿನ ಆಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 5 ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಉಜಿರೆ ರೇಂಜ್ ಮಟ್ಟದ 19 ಮದರಸಗಳ ಪೈಕಿ ಪ್ರಥಮ ಸ್ಥಾನ ಪಡೆದ ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್ ಅವರನ್ನು ಶಾಲು ಹೊದಿಸಿ ನಗದು ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ಎಲ್ಲಾ ತರಾವೀಹ್ ಹಾಗೂ ಹದ್ದಾದ್ ಗೆ ಆಗಮಿಸಿದ ವಿದ್ಯಾರ್ಥಿಗಳಾದ ಸುಜಾಹ್ ಮತ್ತು ಶಿಸ್ತು ಪಾಲಿಸಿದ ಮರ್ವಾನ್ ಅವರಿಗೆ ಅಧ್ಯಕ್ಷರ ವತಿಯಿಂದ ನಗದು ಪುರಸ್ಕಾರ ನೀಡಲಾಯಿತು.
ವಿಶ್ವ ಶಾಂತಿಗೆ ಸಾಮೂಹಿಕ ಪ್ರಾರ್ಥನೆ, ಮರಣ ಹೊಂದಿದವರ ಸ್ಮರಣೆ ಹಾಗೂ ಹಬ್ಬದ ಸಂದೇಶವನ್ನು ಮುಖ್ಯ ಗುರುಗಳು ನಡೆಸಿಕೊಟ್ಟರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya
error: Content is protected !!