July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು, ಮನೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಹಸ್ತಾಂತರ ಮಾಡಿದರು.

ವಾತ್ಸಲ್ಯ ಯೋಜನೆಯಂತಹ ಸಮಾಜವನ್ನು ಕಟ್ಟುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಪುಣ್ಯದ ಕೆಲಸ. ಶ್ರೀ ಕ್ಷೇತ್ರದಿಂದ ಅದೆಷ್ಟೋ ಅಸಹಾಯಕರಿಗೆ ನೆರವನ್ನು ನೀಡುವ ಯೋಜನೆಗಳಿದ್ದು ನಾವು ಇಂತಹ ಕಾರ್ಯಕ್ರಮಗಳಿಗೆ ಕೈ ಜೋಡಿಸಬೇಕು. ಕೈಲಾದವರು ಬಡವರಿಗೆ ಸಹಾಯ ಮಾಡುವುದು ಅಗತ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಒಕ್ಕೂಟ ಅಧ್ಯಕ್ಷರು ಸೀತಾರಾಮ್. ಆರ್, ನಿವೃತ್ತ ಪ್ರಾದೇಶಿಕ ನಿರ್ದೇಶಕರು ಸೀತಾರಾಮ್ ಶೆಟ್ಟಿ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷರು ಪುಷ್ಪಾವತಿ ಆರ್ ಶೆಟ್ಟಿ, ಉಜಿರೆ ಗಣ್ಯರಾದ ರಾಮಚಂದ್ರ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ರಾಮಯ್ಯ ಗೌಡ, ಉಜಿರೆ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರು ಪ್ರಶಾಂತ್ ಜೈನ್, ಮಹಾಬಲ ಕುಲಾಲ್ ಜಿಲ್ಲಾ ನಿರ್ದೇಶಕರು ದ.ಕ ,ತಾಲೂಕು ಯೋಜನಾಧಿಕಾರಿಯವರು ಸುರೇಂದ್ರ ‍ಕೆ, ಉಮರಬ್ಬ ವಲಯಾಧ್ಯಕ್ಷರು ಉಜಿರೆ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಉಜಿರೆ ವಲಯದ ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿರಿದ್ದರು.

ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ಸ್ವಾಗತಿಸಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ ಧನ್ಯವಾದ ನೀಡಿದರು.

Related posts

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya
error: Content is protected !!