September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

ಬೆಳ್ತಂಗಡಿ: ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ದಿ| ಅಣ್ಣಿ ಆಚಾರ್ಯ ಮತ್ತು ಶ್ರೀಮತಿ ವಿನೋದ ಆಚಾರ್ಯ ದಂಪತಿ ಪುತ್ರ,ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ಅಂಡಿಂಜೆ (40ವ) ರವರು ಮಾ.31ರಂದು ಇಂದು ಮುಂಜಾನೆ 4 ಗಂಟೆಗೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.


ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್‌ನಲ್ಲಿ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ.

ಮೃತರು ತಾಯಿ, ಸಹೋದರಿ, ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್‌ ಪಣೆಕ್ಕರ ರವರಿಂದ ಕಣಿಯೂರು ಸ.ಉ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya
error: Content is protected !!