22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

ಬೆಳ್ತಂಗಡಿ: ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ದಿ| ಅಣ್ಣಿ ಆಚಾರ್ಯ ಮತ್ತು ಶ್ರೀಮತಿ ವಿನೋದ ಆಚಾರ್ಯ ದಂಪತಿ ಪುತ್ರ,ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ಅಂಡಿಂಜೆ (40ವ) ರವರು ಮಾ.31ರಂದು ಇಂದು ಮುಂಜಾನೆ 4 ಗಂಟೆಗೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.


ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್‌ನಲ್ಲಿ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ.

ಮೃತರು ತಾಯಿ, ಸಹೋದರಿ, ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya
error: Content is protected !!