32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

ಅರಸಿನಮಕ್ಕಿ : ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಕುಂಟಾಲಪಳಿಕೆ ದ.ಕ ಜಿ.ಪಂ.ಹಿ.ಪ್ರಾ ಶಾಲಾ ವಠಾರದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಮಾ.29 ರಂದು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನುಗೊಂಚಲು ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಸಿಹೆಚ್ ಒ ಶ್ರೀಮತಿ ಅಂಬಲಿ ಜೇಕಬ್ , ಶ್ರೀಮತಿ ವಿದ್ಯಾ ದುಗ್ಗಪ್ಪ ಗೌಡ, ಪೋಷಕರು, ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ಸತ್ಯಪ್ರಭಾ ಎಸ್ ಕುಂಟಾಲಪಳಿಕೆ, ಶ್ರೀಮತಿ ವಿಜಯ ಅರಸಿನಮಕ್ಕಿ, ಶ್ರೀಮತಿ ಸುನಂದ ನಾವಳೆ, ಶ್ರೀಮತಿ ಭಾರತಿ ಹೊಸ್ತೋಟ, ಉಪಸ್ಥಿತರಿದ್ದರು.

ಶ್ರೀಮತಿ ಗೀತಾ ಪ್ರಾರ್ಥಿಸಿ, ಶ್ರೀಮತಿ ಉಷಾ ಸ್ವಾಗತಿಸಿ, ಶ್ರೀಮತಿ ಸುರೇಖಾ ವಂದಿಸಿದರು, ಶ್ರೀಮತಿ ಅಖಿಲಾ ಕಾರ್ಯಕ್ರಮ ನಿರೂಪಿಸಿದರು. ಪೋಷಿತ್ ಸ್ಪರ್ಧೆ ನಡೆಸುವಲ್ಲಿ ಸಹಕರಿಸಿದರು. ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಊಟದ ವ್ಯವಸ್ಥೆಯನ್ನು ನಿರ್ವಹಿಸಿದರು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!