April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

ಕನ್ಯಾಡಿ 2 : ” ತಾಯಿ, ತಂದೆ, ಗುರು, ಸಮಾಜ”ಕ್ಕೆ ಗೌರವ ನೀಡಿ ಬೆಳೆಯಿರಿ ಎಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಯಲ್ಲಿ ನೆರವೇರಿಸಿದ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ.ಶ್ರೀನಿವಾಸ್ ರಾವ್ ಅವರು 8ನೇ ತರಗತಿಯ ಮಕ್ಕಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಿವಿಮಾತು ನೀಡಿದರು.

8ನೇ ತರಗತಿ ವಿದ್ಯಾರ್ಥಿಗಳು ವಿದ್ಯಾರ್ಜನೆಯನ್ನು ನೀಡಿದಂತಹ ಗುರುಗಳಿಗೆ ಆರತಿಯನ್ನು ಬೆಳಗುವ ಮೂಲಕ ಆಶೀರ್ವಾದವನ್ನು ಪಡೆದುಕೊಂಡರು. ವಿದ್ಯಾರ್ಥಿಗಳು ತಾವು ಶಾಲೆಯಲ್ಲಿ ಪಡೆದ ವಿದ್ಯೆ, ಮೌಲ್ಯ, ಶಿಕ್ಷಕರೊಂದಿಗಿನ ಒಡನಾಟದ ಅನುಭವ ಮನಬಿಚ್ಚಿ ತಮ್ಮ ಭಾವನೆಗಳನ್ನು ಹಂಚಿಕೊಂಡರು. 7ನೇ ತರಗತಿ ವಿದ್ಯಾರ್ಥಿಗಳು ಬೀಳ್ಕೊಡುವವರ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ತರಗತಿ ಶಿಕ್ಷಕ ನಾಗರಾಜ್ ಇವರು ಮಕ್ಕಳೊಂದಿಗೆ ಕಳೆದ ಕ್ಷಣವನ್ನು ಮೆಲುಕು ಹಾಕುವ ಮೂಲಕ ಅವರನ್ನು ಹಾರೈಸಿದರು.

ಶಾಲಾ ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ ತಮ್ಮ ಪ್ರಾಸ್ತಾವಿಕ ನುಡಿಯೊಂದಿಗೆ ಮಕ್ಕಳಿಗೆ ಆಶೀರ್ವಾದವನ್ನು ನೀಡಿದರು. ಎಂಟನೇ ತರಗತಿ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳು ಗಳಿಸಿಕೊಂಡ ಉತ್ತಮ ನಡವಳಿಕೆ, ಗುಣ, ವಿದ್ಯಾಭ್ಯಾಸದ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ಶಾಲೆಗೆ ತಮ್ಮ ನೆನಪಿನ ಕಾಣಿಕೆಯಾಗಿ ” ಏರ್ ಕೂಲರ್ “ಅನ್ನು ನೀಡುವ ಮೂಲಕ ತಮ್ಮ ಶಾಲೆಯ ಮೇಲಿರುವ ಗೌರವವನ್ನು ವ್ಯಕ್ತಪಡಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯೆ ಮತ್ತು ಶಾಲೆಯ ಅಕ್ಷರ ದಾಸೋಹದ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ರೀಮತಿ ಭಾರತಿ ಅವರಿಗೆ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ನವೀನ್ ಚಂದ್ರ ಶೆಟ್ಟಿ, ಅರುಣ್ ಕುಮಾರ್, ಪ್ರಭಾಕರ್ ಗೌಡ ಬೋಳ್ಮಾ, ಸುಂದರ ಗೌಡ ಪುಡ್ಕೆತ್ತು ,( ಮಾಜಿ ಮಂಡಲ ಪ್ರಧಾನರು ) ಚಾಮರಾಜ ಇಂದ್ರ., ಸೂರ್ಯಪ್ರಕಾಶ್, ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ನಂದ, ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಸದಸ್ಯರು, ಹಳೆ ವಿದ್ಯಾರ್ಥಿ ಸುದರ್ಶನ್, 8ನೇ ತರಗತಿ ವಿದ್ಯಾರ್ಥಿಗಳ ಪೋಷಕರು ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು, ಶಾಲಾ ಅಕ್ಷರ ದಾಸೋಹ ಸಿಬ್ಬಂದಿಗಳು ಭಾಗಿಯಾದರು.

ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ ಮಕ್ಕಳಿಗೆ ಶುಭ ಹಾರೈಸಿದರು. ವಂದನೆಯನ್ನು 7ನೇ ತರಗತಿ ವಿದ್ಯಾರ್ಥಿನಿ ನಿನಾದ ಮತ್ತು ನಿರೂಪಣೆಯನ್ನು ವಿದ್ಯಾರ್ಥಿನಿ ಅನನ್ಯ ನೆರವೇರಿಸಿದರು.

Related posts

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya
error: Content is protected !!