23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

ಕಿಲ್ಲೂರು: ಇತಿಹಾಸ ಪ್ರಸಿದ್ಧವಾದ ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.


ಸಂಶೀರ್ ಸಖಾಫಿ ಪರಪ್ಪು ಈದುಲ್ ಫಿತ್ರ್ ನ ಸಂದೇಶ ಭಾಷಣ ಮಾಡಿ ಈದ್ ನಮಾಝ್ ಗೆ ನೇತೃತ್ವ ನೀಡಿದರು. ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀ ಝುಹ್ರಿ ರವರು ಅಸಂಶ ಭಾಷಣ ಮಾಡಿ ಶುಭಹಾರೈಸುದರೊಂದಿಗೆ ಮಾದಕ ದ್ರವ್ಯದ ಬಗ್ಗೆ ಯುವಕರಿಗೆ ಜಾಗೃತಿ ಮೂಡಿಸಿದರು.


ವರ್ಷಗಳ ಕಾಲ ಸೇವೆ ಮಾಡಿ ನಿರ್ಗಮಿಸುತ್ತಿರುವ ಸಂಶೀರ್ ಸಖಾಫಿ ಪರಪ್ಪು, ರಶೀದ್ ಮದನಿ ಇಂದಬೆಟ್ಟು, ಅಬ್ದುಲ್ ಸತ್ತಾರ್ ಸಖಾಫಿ ಯವರನ್ನು ಜಮಾಅತ್ ನವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಅದೇ ರೀತಿ ಪವಿತ್ರ ರಮಲಾನ್ ನಲ್ಲಿ 30 ದಿನಗಳು ತರವೀಹ್ ಮತ್ತು ಸುಬುಹಿ ನಮಾಝ್ ಗೆ ಬರುತ್ತಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಜಮಾಅತ್ ಅಧ್ಯಕ್ಷರ ವತಿಯಿಂದ ಸೈಕಲ್ ನೀಡಿ ಮಕ್ಕಳನ್ನು ಗೌರವಿಸಿದ್ದು ವಿಶೇಷವಾಗಿತ್ತು.


ಆಡಳಿತ ಕಮಿಟಿಯ ಉಪಾಧ್ಯಕ್ಷ ಸಾಹುಲ್ ಹಮೀದ್, ಕಾರ್ಯದರ್ಶಿ ಸಾಹುಲ್ , ಕೋಶಾಧಿಕಾರಿ ಮಲ್ಲಿಗೆ ಅಬೂಬಕ್ಕರ್, ಸದಸ್ಯರಾದ ಮುಹಮ್ಮದ್ ಎಮ್, ಹಂಝತ್ ಕಿಲ್ಲೂರು, ಹೆಚ್.ಎನ್ ಹನೀಫ್, ಬದ್ರುದ್ದೀನ್, ಮುಹಮ್ಮದ್ ಮಣ್ಣಗುಂಡಿ, ಅಶ್ರಫ್ ಶ್ರವಣಗುಂಡ, ಹನೀಫ್ ಮಲ್ಲಿಗೆ ಹಾಗೂ ಹಿರಿಯರಾದ ಕಾಸಿಮ್ ಮಲ್ಲಿಗೆ ಮನೆ, ಇಸ್ಮಾಯಿಲ್ ಫೈಝಿ, ಬಿಹೆಚ್ ಅಬೂಬಕ್ಕರ್ ಹಾಜಿ ಹಾಗೂ ಜಮಾಅತ್ ಹಿರಿಯರು, ಯುವಕರು, ಮಕ್ಕಳು ಭಾಗವಹಿಸಿ ಲೋಕ ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು.

Related posts

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya
error: Content is protected !!