23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು.

ಧರ್ಮ ಗುರುಗಳಾದ ಖತೀಬ್ ನೌಷಾದ್ ಸಖಾಫಿ ಈದ್ ಸಂದೇಶ ಪ್ರವಚನ ನೀಡಿದರು. ನಂತರ ಸಾಮೂಹಿಕ ಈದ್ ನಮಾಝ್ ಮಾಡಿ. ಅಲ್ಲಾಹನ ಸ್ಮರಣೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಈದ್ ಎಂದರೆ ಹಬ್ಬ, ಫಿತರ್ ಎಂಬುದು ದಾನದ ಸಂಕೇತವಾಗಿದೆ. ಹೀಗಾಗಿ ರಂಜಾನ್ ದಾನ-ಧರ್ಮಗಳ ಹಬ್ಬ. ವರ್ಷದೊಳಗೆ ದುಡಿದ ಹಣದಲ್ಲಿ ಒಂದಿಷ್ಟನ್ನು ಸಮುದಾಯದ ಉಳ್ಳವರು ಬಡವರಿಗೆ ದಾನ ಮಾಡಿದರು.

ಕಳೆದ ಒಂದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸಿದ ನೌಷಾದ್ ಸಖಾಫಿಯರವರನ್ನು ಬಿಳ್ಕೊಡಲಾಯಿತು. ರಿಫಾಯ್ಯಾ ಜುಮಾ ಮಸೀದಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು, ಎಸ್.ಎಸ್.ಎಫ್ ಬೆದ್ರಬೆಟ್ಟು ಯೂನಿಟ್ ಪದಾಧಿಕಾರಿಗಳು, ಎಸ್.ವೈ.ಎಸ್ ಪದಾಧಿಕಾರಿಗಳು, ಆಡಳಿತ ಸಮಿತಿ ಪದಾಧಿಕಾರಿಗಳು, ಯುನೈಟೆಡ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಜಮಾತ್ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ಆಡಳಿತ ಸಮಿತಿ ಕಾರ್ಯದರ್ಶಿ ಮುಸ್ತಫಾ ಧನ್ಯವಾದ ನೆರವೇರಿಸಿದರು.

Related posts

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya
error: Content is protected !!