September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು.

ಧರ್ಮ ಗುರುಗಳಾದ ಖತೀಬ್ ನೌಷಾದ್ ಸಖಾಫಿ ಈದ್ ಸಂದೇಶ ಪ್ರವಚನ ನೀಡಿದರು. ನಂತರ ಸಾಮೂಹಿಕ ಈದ್ ನಮಾಝ್ ಮಾಡಿ. ಅಲ್ಲಾಹನ ಸ್ಮರಣೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಈದ್ ಎಂದರೆ ಹಬ್ಬ, ಫಿತರ್ ಎಂಬುದು ದಾನದ ಸಂಕೇತವಾಗಿದೆ. ಹೀಗಾಗಿ ರಂಜಾನ್ ದಾನ-ಧರ್ಮಗಳ ಹಬ್ಬ. ವರ್ಷದೊಳಗೆ ದುಡಿದ ಹಣದಲ್ಲಿ ಒಂದಿಷ್ಟನ್ನು ಸಮುದಾಯದ ಉಳ್ಳವರು ಬಡವರಿಗೆ ದಾನ ಮಾಡಿದರು.

ಕಳೆದ ಒಂದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸಿದ ನೌಷಾದ್ ಸಖಾಫಿಯರವರನ್ನು ಬಿಳ್ಕೊಡಲಾಯಿತು. ರಿಫಾಯ್ಯಾ ಜುಮಾ ಮಸೀದಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು, ಎಸ್.ಎಸ್.ಎಫ್ ಬೆದ್ರಬೆಟ್ಟು ಯೂನಿಟ್ ಪದಾಧಿಕಾರಿಗಳು, ಎಸ್.ವೈ.ಎಸ್ ಪದಾಧಿಕಾರಿಗಳು, ಆಡಳಿತ ಸಮಿತಿ ಪದಾಧಿಕಾರಿಗಳು, ಯುನೈಟೆಡ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಜಮಾತ್ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ಆಡಳಿತ ಸಮಿತಿ ಕಾರ್ಯದರ್ಶಿ ಮುಸ್ತಫಾ ಧನ್ಯವಾದ ನೆರವೇರಿಸಿದರು.

Related posts

ಧರ್ಮಸ್ಥಳ: ಪೊಸೊಳಿಕೆಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ; ಲಕ್ಷಾಂತರ ರೂ ನಷ್ಟ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಲಾಯಿಲ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಾರ್ತಿಕ್ ಅಸೋಸಿಯೇಟ್ ನ ಮಾಲಕರಿಂದ ಆಹಾರದ ಕಿಟ್ ವಿತರಣೆ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya
error: Content is protected !!