23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು.

ಧರ್ಮ ಗುರುಗಳಾದ ಖತೀಬ್ ನೌಷಾದ್ ಸಖಾಫಿ ಈದ್ ಸಂದೇಶ ಪ್ರವಚನ ನೀಡಿದರು. ನಂತರ ಸಾಮೂಹಿಕ ಈದ್ ನಮಾಝ್ ಮಾಡಿ. ಅಲ್ಲಾಹನ ಸ್ಮರಣೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಈದ್ ಎಂದರೆ ಹಬ್ಬ, ಫಿತರ್ ಎಂಬುದು ದಾನದ ಸಂಕೇತವಾಗಿದೆ. ಹೀಗಾಗಿ ರಂಜಾನ್ ದಾನ-ಧರ್ಮಗಳ ಹಬ್ಬ. ವರ್ಷದೊಳಗೆ ದುಡಿದ ಹಣದಲ್ಲಿ ಒಂದಿಷ್ಟನ್ನು ಸಮುದಾಯದ ಉಳ್ಳವರು ಬಡವರಿಗೆ ದಾನ ಮಾಡಿದರು.

ಕಳೆದ ಒಂದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸಿದ ನೌಷಾದ್ ಸಖಾಫಿಯರವರನ್ನು ಬಿಳ್ಕೊಡಲಾಯಿತು. ರಿಫಾಯ್ಯಾ ಜುಮಾ ಮಸೀದಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು, ಎಸ್.ಎಸ್.ಎಫ್ ಬೆದ್ರಬೆಟ್ಟು ಯೂನಿಟ್ ಪದಾಧಿಕಾರಿಗಳು, ಎಸ್.ವೈ.ಎಸ್ ಪದಾಧಿಕಾರಿಗಳು, ಆಡಳಿತ ಸಮಿತಿ ಪದಾಧಿಕಾರಿಗಳು, ಯುನೈಟೆಡ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಜಮಾತ್ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ಆಡಳಿತ ಸಮಿತಿ ಕಾರ್ಯದರ್ಶಿ ಮುಸ್ತಫಾ ಧನ್ಯವಾದ ನೆರವೇರಿಸಿದರು.

Related posts

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya
error: Content is protected !!