22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು.

ಧರ್ಮ ಗುರುಗಳಾದ ಖತೀಬ್ ನೌಷಾದ್ ಸಖಾಫಿ ಈದ್ ಸಂದೇಶ ಪ್ರವಚನ ನೀಡಿದರು. ನಂತರ ಸಾಮೂಹಿಕ ಈದ್ ನಮಾಝ್ ಮಾಡಿ. ಅಲ್ಲಾಹನ ಸ್ಮರಣೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಈದ್ ಎಂದರೆ ಹಬ್ಬ, ಫಿತರ್ ಎಂಬುದು ದಾನದ ಸಂಕೇತವಾಗಿದೆ. ಹೀಗಾಗಿ ರಂಜಾನ್ ದಾನ-ಧರ್ಮಗಳ ಹಬ್ಬ. ವರ್ಷದೊಳಗೆ ದುಡಿದ ಹಣದಲ್ಲಿ ಒಂದಿಷ್ಟನ್ನು ಸಮುದಾಯದ ಉಳ್ಳವರು ಬಡವರಿಗೆ ದಾನ ಮಾಡಿದರು.

ಕಳೆದ ಒಂದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸಿದ ನೌಷಾದ್ ಸಖಾಫಿಯರವರನ್ನು ಬಿಳ್ಕೊಡಲಾಯಿತು. ರಿಫಾಯ್ಯಾ ಜುಮಾ ಮಸೀದಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು, ಎಸ್.ಎಸ್.ಎಫ್ ಬೆದ್ರಬೆಟ್ಟು ಯೂನಿಟ್ ಪದಾಧಿಕಾರಿಗಳು, ಎಸ್.ವೈ.ಎಸ್ ಪದಾಧಿಕಾರಿಗಳು, ಆಡಳಿತ ಸಮಿತಿ ಪದಾಧಿಕಾರಿಗಳು, ಯುನೈಟೆಡ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಜಮಾತ್ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ಆಡಳಿತ ಸಮಿತಿ ಕಾರ್ಯದರ್ಶಿ ಮುಸ್ತಫಾ ಧನ್ಯವಾದ ನೆರವೇರಿಸಿದರು.

Related posts

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya
error: Content is protected !!