23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಖುತುಬಾ ಪಾರಾಯಣ ಮತ್ತು ಚೆರಿಯ ಪೆರ್ನಾಲ್ ನಮಾಝ್ ಗೆ ನೇತೃತ್ವ ನೀಡಿದರು. ಉಸ್ತಾದ್ ತ್ವಾಹಿರ್ ಸ‌ಅದಿ ತಕ್ಬೀರ್ ಗೆ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷ ಬಶೀರ್ ನೆಕ್ಕರೆ ಸಹಿತ ಆಡಳಿತ ಸಮಿತಿ ಪದಾಧಿಕಾರಿಗಳು, ಜಮಾಅತ್ ನ ಸರ್ವ ಸದಸ್ಯರು ಭಾಗವಹಿಸಿದ್ದರು. ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್ ಉಪಸ್ಥಿತರಿದ್ದರು.

ಈ ವೇಳೆ ಪ್ರಸ್ತುತ ಸಾಲಿನ ಆಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 5 ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಉಜಿರೆ ರೇಂಜ್ ಮಟ್ಟದ 19 ಮದರಸಗಳ ಪೈಕಿ ಪ್ರಥಮ ಸ್ಥಾನ ಪಡೆದ ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್ ಅವರನ್ನು ಶಾಲು ಹೊದಿಸಿ ನಗದು ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ಎಲ್ಲಾ ತರಾವೀಹ್ ಹಾಗೂ ಹದ್ದಾದ್ ಗೆ ಆಗಮಿಸಿದ ವಿದ್ಯಾರ್ಥಿಗಳಾದ ಸುಜಾಹ್ ಮತ್ತು ಶಿಸ್ತು ಪಾಲಿಸಿದ ಮರ್ವಾನ್ ಅವರಿಗೆ ಅಧ್ಯಕ್ಷರ ವತಿಯಿಂದ ನಗದು ಪುರಸ್ಕಾರ ನೀಡಲಾಯಿತು.
ವಿಶ್ವ ಶಾಂತಿಗೆ ಸಾಮೂಹಿಕ ಪ್ರಾರ್ಥನೆ, ಮರಣ ಹೊಂದಿದವರ ಸ್ಮರಣೆ ಹಾಗೂ ಹಬ್ಬದ ಸಂದೇಶವನ್ನು ಮುಖ್ಯ ಗುರುಗಳು ನಡೆಸಿಕೊಟ್ಟರು.

Related posts

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya
error: Content is protected !!