22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಖುತುಬಾ ಪಾರಾಯಣ ಮತ್ತು ಚೆರಿಯ ಪೆರ್ನಾಲ್ ನಮಾಝ್ ಗೆ ನೇತೃತ್ವ ನೀಡಿದರು. ಉಸ್ತಾದ್ ತ್ವಾಹಿರ್ ಸ‌ಅದಿ ತಕ್ಬೀರ್ ಗೆ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷ ಬಶೀರ್ ನೆಕ್ಕರೆ ಸಹಿತ ಆಡಳಿತ ಸಮಿತಿ ಪದಾಧಿಕಾರಿಗಳು, ಜಮಾಅತ್ ನ ಸರ್ವ ಸದಸ್ಯರು ಭಾಗವಹಿಸಿದ್ದರು. ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್ ಉಪಸ್ಥಿತರಿದ್ದರು.

ಈ ವೇಳೆ ಪ್ರಸ್ತುತ ಸಾಲಿನ ಆಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 5 ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಉಜಿರೆ ರೇಂಜ್ ಮಟ್ಟದ 19 ಮದರಸಗಳ ಪೈಕಿ ಪ್ರಥಮ ಸ್ಥಾನ ಪಡೆದ ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್ ಅವರನ್ನು ಶಾಲು ಹೊದಿಸಿ ನಗದು ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ಎಲ್ಲಾ ತರಾವೀಹ್ ಹಾಗೂ ಹದ್ದಾದ್ ಗೆ ಆಗಮಿಸಿದ ವಿದ್ಯಾರ್ಥಿಗಳಾದ ಸುಜಾಹ್ ಮತ್ತು ಶಿಸ್ತು ಪಾಲಿಸಿದ ಮರ್ವಾನ್ ಅವರಿಗೆ ಅಧ್ಯಕ್ಷರ ವತಿಯಿಂದ ನಗದು ಪುರಸ್ಕಾರ ನೀಡಲಾಯಿತು.
ವಿಶ್ವ ಶಾಂತಿಗೆ ಸಾಮೂಹಿಕ ಪ್ರಾರ್ಥನೆ, ಮರಣ ಹೊಂದಿದವರ ಸ್ಮರಣೆ ಹಾಗೂ ಹಬ್ಬದ ಸಂದೇಶವನ್ನು ಮುಖ್ಯ ಗುರುಗಳು ನಡೆಸಿಕೊಟ್ಟರು.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!