September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಖುತುಬಾ ಪಾರಾಯಣ ಮತ್ತು ಚೆರಿಯ ಪೆರ್ನಾಲ್ ನಮಾಝ್ ಗೆ ನೇತೃತ್ವ ನೀಡಿದರು. ಉಸ್ತಾದ್ ತ್ವಾಹಿರ್ ಸ‌ಅದಿ ತಕ್ಬೀರ್ ಗೆ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷ ಬಶೀರ್ ನೆಕ್ಕರೆ ಸಹಿತ ಆಡಳಿತ ಸಮಿತಿ ಪದಾಧಿಕಾರಿಗಳು, ಜಮಾಅತ್ ನ ಸರ್ವ ಸದಸ್ಯರು ಭಾಗವಹಿಸಿದ್ದರು. ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್ ಉಪಸ್ಥಿತರಿದ್ದರು.

ಈ ವೇಳೆ ಪ್ರಸ್ತುತ ಸಾಲಿನ ಆಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 5 ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಉಜಿರೆ ರೇಂಜ್ ಮಟ್ಟದ 19 ಮದರಸಗಳ ಪೈಕಿ ಪ್ರಥಮ ಸ್ಥಾನ ಪಡೆದ ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್ ಅವರನ್ನು ಶಾಲು ಹೊದಿಸಿ ನಗದು ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ಎಲ್ಲಾ ತರಾವೀಹ್ ಹಾಗೂ ಹದ್ದಾದ್ ಗೆ ಆಗಮಿಸಿದ ವಿದ್ಯಾರ್ಥಿಗಳಾದ ಸುಜಾಹ್ ಮತ್ತು ಶಿಸ್ತು ಪಾಲಿಸಿದ ಮರ್ವಾನ್ ಅವರಿಗೆ ಅಧ್ಯಕ್ಷರ ವತಿಯಿಂದ ನಗದು ಪುರಸ್ಕಾರ ನೀಡಲಾಯಿತು.
ವಿಶ್ವ ಶಾಂತಿಗೆ ಸಾಮೂಹಿಕ ಪ್ರಾರ್ಥನೆ, ಮರಣ ಹೊಂದಿದವರ ಸ್ಮರಣೆ ಹಾಗೂ ಹಬ್ಬದ ಸಂದೇಶವನ್ನು ಮುಖ್ಯ ಗುರುಗಳು ನಡೆಸಿಕೊಟ್ಟರು.

Related posts

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya
error: Content is protected !!