April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ನಲ್ಲಿ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಈದುಲ್ ಫಿತ್ರ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ಹೊಸ ವಸ್ತ್ರ ಗಳನ್ನು ಧರಿಸಿ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.

ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!