24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ನಲ್ಲಿ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಈದುಲ್ ಫಿತ್ರ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ಹೊಸ ವಸ್ತ್ರ ಗಳನ್ನು ಧರಿಸಿ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.

ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!