23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ನಲ್ಲಿ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಈದುಲ್ ಫಿತ್ರ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ಹೊಸ ವಸ್ತ್ರ ಗಳನ್ನು ಧರಿಸಿ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.

ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!