July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ನಲ್ಲಿ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಈದುಲ್ ಫಿತ್ರ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ಹೊಸ ವಸ್ತ್ರ ಗಳನ್ನು ಧರಿಸಿ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.

ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya
error: Content is protected !!