July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

ಬೆಳ್ತಂಗಡಿ: ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ದಿ| ಅಣ್ಣಿ ಆಚಾರ್ಯ ಮತ್ತು ಶ್ರೀಮತಿ ವಿನೋದ ಆಚಾರ್ಯ ದಂಪತಿ ಪುತ್ರ,ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ಅಂಡಿಂಜೆ (40ವ) ರವರು ಮಾ.31ರಂದು ಇಂದು ಮುಂಜಾನೆ 4 ಗಂಟೆಗೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.


ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್‌ನಲ್ಲಿ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ.

ಮೃತರು ತಾಯಿ, ಸಹೋದರಿ, ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!