23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

ಉಜಿರೆ: ದಾವಣಗೆರೆಯ ಪ್ರತಿಷ್ಠಿತ ಜಿ.ಎಮ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ ಆಯೋಜನೆ ಮಾಡಿದ್ದ ವಿವಿಧ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಗಳಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು 9 ವಿಭಾಗಗಳಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ತಾಂತ್ರಿಕ ಕೌಶಲ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಈ ಸ್ಪರ್ಧೆಗಳಲ್ಲಿ ಎಸ್ ಡಿ ಯಂ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಎಲ್ಲರ ಗಮನ ಸೆಳೆದಿದ್ದಾರೆ. ಈ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿಗಳಾದ ರೆಹನ್, ಮಧುಕರ, ಸಂದೇಶ್ ,ಶ್ರವಣ್ ಕುಮಾರ್, ಹರ್ಷಕುಮಾರ್ ಪ್ರಾಜೆಕ್ಟ್ ಎಕ್ಸ್ಪೋ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಪ್ರಶಾಂತ್ ಮತ್ತು ಪ್ರಜ್ವಲ್ ಗೌಡ ಟೆಕ್ನಿಕಲ್ ಪೇಪರ್ ಪ್ರೆಸೆಂಟೇಷನ್ ನಲ್ಲಿ ಪ್ರಥಮ ಬಹುಮಾನವನ್ನು ಮತ್ತು ಚಿರಂಜೀವಿ ಚಿನ್ಮಯಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ. ಅದೇ ವಿಭಾಗದ ರವಿಶಂಕರ್ ಪಾಟೀಲ್ ಮತ್ತು ಅಭಿಷೇಕ್ ಪ್ರಶಾಂತ್ ತಾಂತ್ರಿಕ ರಸಪ್ರಶ್ನೆ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಸಿವಿಲ್ ವಿಭಾಗದ ಶ್ರವಣ್ ಕುಮಾರ್ ಟೆಕ್ನಿಕಲ್ ಪೇಪರ್ ಪ್ರೆಸೆಂಟೇಷನ್ ನಲ್ಲಿ ದ್ವಿತೀಯ ಸ್ಥಾನ ಹಾಗೂ ರೆಹನ್ ತಾಂತ್ರಿಕ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ಟೆಕ್ ಸ್ಕಿಲ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರೆಲ್ಲರಿಗೂ ಕಾಲೇಜಿನ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿವರ್ಗದವರು ಅಭಿನಂದಿಸಿದ್ದಾರೆ.

Related posts

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya
error: Content is protected !!