September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು.

ಧರ್ಮ ಗುರುಗಳಾದ ಖತೀಬ್ ನೌಷಾದ್ ಸಖಾಫಿ ಈದ್ ಸಂದೇಶ ಪ್ರವಚನ ನೀಡಿದರು. ನಂತರ ಸಾಮೂಹಿಕ ಈದ್ ನಮಾಝ್ ಮಾಡಿ. ಅಲ್ಲಾಹನ ಸ್ಮರಣೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಈದ್ ಎಂದರೆ ಹಬ್ಬ, ಫಿತರ್ ಎಂಬುದು ದಾನದ ಸಂಕೇತವಾಗಿದೆ. ಹೀಗಾಗಿ ರಂಜಾನ್ ದಾನ-ಧರ್ಮಗಳ ಹಬ್ಬ. ವರ್ಷದೊಳಗೆ ದುಡಿದ ಹಣದಲ್ಲಿ ಒಂದಿಷ್ಟನ್ನು ಸಮುದಾಯದ ಉಳ್ಳವರು ಬಡವರಿಗೆ ದಾನ ಮಾಡಿದರು.

ಕಳೆದ ಒಂದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸಿದ ನೌಷಾದ್ ಸಖಾಫಿಯರವರನ್ನು ಬಿಳ್ಕೊಡಲಾಯಿತು. ರಿಫಾಯ್ಯಾ ಜುಮಾ ಮಸೀದಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು, ಎಸ್.ಎಸ್.ಎಫ್ ಬೆದ್ರಬೆಟ್ಟು ಯೂನಿಟ್ ಪದಾಧಿಕಾರಿಗಳು, ಎಸ್.ವೈ.ಎಸ್ ಪದಾಧಿಕಾರಿಗಳು, ಆಡಳಿತ ಸಮಿತಿ ಪದಾಧಿಕಾರಿಗಳು, ಯುನೈಟೆಡ್ ಅಸೋಸಿಯೇಶನ್ ಪದಾಧಿಕಾರಿಗಳು ಮತ್ತು ಜಮಾತ್ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ಆಡಳಿತ ಸಮಿತಿ ಕಾರ್ಯದರ್ಶಿ ಮುಸ್ತಫಾ ಧನ್ಯವಾದ ನೆರವೇರಿಸಿದರು.

Related posts

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya
error: Content is protected !!