23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಖುತುಬಾ ಪಾರಾಯಣ ಮತ್ತು ಚೆರಿಯ ಪೆರ್ನಾಲ್ ನಮಾಝ್ ಗೆ ನೇತೃತ್ವ ನೀಡಿದರು. ಉಸ್ತಾದ್ ತ್ವಾಹಿರ್ ಸ‌ಅದಿ ತಕ್ಬೀರ್ ಗೆ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷ ಬಶೀರ್ ನೆಕ್ಕರೆ ಸಹಿತ ಆಡಳಿತ ಸಮಿತಿ ಪದಾಧಿಕಾರಿಗಳು, ಜಮಾಅತ್ ನ ಸರ್ವ ಸದಸ್ಯರು ಭಾಗವಹಿಸಿದ್ದರು. ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್ ಉಪಸ್ಥಿತರಿದ್ದರು.

ಈ ವೇಳೆ ಪ್ರಸ್ತುತ ಸಾಲಿನ ಆಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 5 ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಉಜಿರೆ ರೇಂಜ್ ಮಟ್ಟದ 19 ಮದರಸಗಳ ಪೈಕಿ ಪ್ರಥಮ ಸ್ಥಾನ ಪಡೆದ ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್ ಅವರನ್ನು ಶಾಲು ಹೊದಿಸಿ ನಗದು ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ಎಲ್ಲಾ ತರಾವೀಹ್ ಹಾಗೂ ಹದ್ದಾದ್ ಗೆ ಆಗಮಿಸಿದ ವಿದ್ಯಾರ್ಥಿಗಳಾದ ಸುಜಾಹ್ ಮತ್ತು ಶಿಸ್ತು ಪಾಲಿಸಿದ ಮರ್ವಾನ್ ಅವರಿಗೆ ಅಧ್ಯಕ್ಷರ ವತಿಯಿಂದ ನಗದು ಪುರಸ್ಕಾರ ನೀಡಲಾಯಿತು.
ವಿಶ್ವ ಶಾಂತಿಗೆ ಸಾಮೂಹಿಕ ಪ್ರಾರ್ಥನೆ, ಮರಣ ಹೊಂದಿದವರ ಸ್ಮರಣೆ ಹಾಗೂ ಹಬ್ಬದ ಸಂದೇಶವನ್ನು ಮುಖ್ಯ ಗುರುಗಳು ನಡೆಸಿಕೊಟ್ಟರು.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya
error: Content is protected !!