September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಖುತುಬಾ ಪಾರಾಯಣ ಮತ್ತು ಚೆರಿಯ ಪೆರ್ನಾಲ್ ನಮಾಝ್ ಗೆ ನೇತೃತ್ವ ನೀಡಿದರು. ಉಸ್ತಾದ್ ತ್ವಾಹಿರ್ ಸ‌ಅದಿ ತಕ್ಬೀರ್ ಗೆ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷ ಬಶೀರ್ ನೆಕ್ಕರೆ ಸಹಿತ ಆಡಳಿತ ಸಮಿತಿ ಪದಾಧಿಕಾರಿಗಳು, ಜಮಾಅತ್ ನ ಸರ್ವ ಸದಸ್ಯರು ಭಾಗವಹಿಸಿದ್ದರು. ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್ ಉಪಸ್ಥಿತರಿದ್ದರು.

ಈ ವೇಳೆ ಪ್ರಸ್ತುತ ಸಾಲಿನ ಆಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 5 ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಉಜಿರೆ ರೇಂಜ್ ಮಟ್ಟದ 19 ಮದರಸಗಳ ಪೈಕಿ ಪ್ರಥಮ ಸ್ಥಾನ ಪಡೆದ ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್ ಅವರನ್ನು ಶಾಲು ಹೊದಿಸಿ ನಗದು ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ಎಲ್ಲಾ ತರಾವೀಹ್ ಹಾಗೂ ಹದ್ದಾದ್ ಗೆ ಆಗಮಿಸಿದ ವಿದ್ಯಾರ್ಥಿಗಳಾದ ಸುಜಾಹ್ ಮತ್ತು ಶಿಸ್ತು ಪಾಲಿಸಿದ ಮರ್ವಾನ್ ಅವರಿಗೆ ಅಧ್ಯಕ್ಷರ ವತಿಯಿಂದ ನಗದು ಪುರಸ್ಕಾರ ನೀಡಲಾಯಿತು.
ವಿಶ್ವ ಶಾಂತಿಗೆ ಸಾಮೂಹಿಕ ಪ್ರಾರ್ಥನೆ, ಮರಣ ಹೊಂದಿದವರ ಸ್ಮರಣೆ ಹಾಗೂ ಹಬ್ಬದ ಸಂದೇಶವನ್ನು ಮುಖ್ಯ ಗುರುಗಳು ನಡೆಸಿಕೊಟ್ಟರು.

Related posts

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!