July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ನಲ್ಲಿ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಈದುಲ್ ಫಿತ್ರ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ಹೊಸ ವಸ್ತ್ರ ಗಳನ್ನು ಧರಿಸಿ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.

ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya
error: Content is protected !!