July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು, ಮನೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಹಸ್ತಾಂತರ ಮಾಡಿದರು.

ವಾತ್ಸಲ್ಯ ಯೋಜನೆಯಂತಹ ಸಮಾಜವನ್ನು ಕಟ್ಟುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಪುಣ್ಯದ ಕೆಲಸ. ಶ್ರೀ ಕ್ಷೇತ್ರದಿಂದ ಅದೆಷ್ಟೋ ಅಸಹಾಯಕರಿಗೆ ನೆರವನ್ನು ನೀಡುವ ಯೋಜನೆಗಳಿದ್ದು ನಾವು ಇಂತಹ ಕಾರ್ಯಕ್ರಮಗಳಿಗೆ ಕೈ ಜೋಡಿಸಬೇಕು. ಕೈಲಾದವರು ಬಡವರಿಗೆ ಸಹಾಯ ಮಾಡುವುದು ಅಗತ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಒಕ್ಕೂಟ ಅಧ್ಯಕ್ಷರು ಸೀತಾರಾಮ್. ಆರ್, ನಿವೃತ್ತ ಪ್ರಾದೇಶಿಕ ನಿರ್ದೇಶಕರು ಸೀತಾರಾಮ್ ಶೆಟ್ಟಿ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷರು ಪುಷ್ಪಾವತಿ ಆರ್ ಶೆಟ್ಟಿ, ಉಜಿರೆ ಗಣ್ಯರಾದ ರಾಮಚಂದ್ರ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ರಾಮಯ್ಯ ಗೌಡ, ಉಜಿರೆ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರು ಪ್ರಶಾಂತ್ ಜೈನ್, ಮಹಾಬಲ ಕುಲಾಲ್ ಜಿಲ್ಲಾ ನಿರ್ದೇಶಕರು ದ.ಕ ,ತಾಲೂಕು ಯೋಜನಾಧಿಕಾರಿಯವರು ಸುರೇಂದ್ರ ‍ಕೆ, ಉಮರಬ್ಬ ವಲಯಾಧ್ಯಕ್ಷರು ಉಜಿರೆ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಉಜಿರೆ ವಲಯದ ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿರಿದ್ದರು.

ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ಸ್ವಾಗತಿಸಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ ಧನ್ಯವಾದ ನೀಡಿದರು.

Related posts

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕ , ಯುವ ವಿಜ್ಞಾನಿ ದೀಪಕ್ ಸಂಶೋಧನಾ ಪಯಣದ ಕೆಲಸಕ್ಕೆ ಸುಧಾ ಮೂರ್ತಿರವರಿಂದ ಶ್ಲಾಘನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

Suddi Udaya
error: Content is protected !!