25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

ಬೆಳ್ತಂಗಡಿ: ಕಿಲ್ಲೂರು ಮುಖ್ಯ ರಸ್ತೆಯ ಮಧ್ಯೆ, ನಾವೂರು ಗ್ರಾಮದ ಮುರ ಎಂಬಲ್ಲಿನ ಸೇತುವೆ ಬಿರುಕು, ಸೇತುವೆಯ ಎರಡು ಕಡೆ ಸುರಕ್ಷತೆ ಗೋಡೆ ಇಲ್ಲದೆ ಅಪಘಾತಗಳು ನಿರಂತರವಾಗಿ ನಡೆಯುತ್ತಿದ್ದು ವರ್ಷಗಳಾದರೂ ಯಾವುದೇ ವ್ಯವಸ್ಥಿತ ಪರಿಹಾರ ಆಗಿಲ್ಲ. ಸುಮಾರು ವರ್ಷಗಳಿಂದ ಎಸ್ ಡಿ ಪಿ ಐ ನಾವೂರು ವತಿಯಿಂದ ಶಾಶ್ವತ ಪರಿಹಾರ, ಸುರಕ್ಷಿತ ತಡೆ ಗೋಡೆ, ಸೇತುವೆಯ ಅಗಲೀಕರಣಕ್ಕೆ ಮನವಿ ನೀಡುತ್ತಾ ಬಂದಿದೆ. ಭರವಸೆ ನೀಡುತ್ತಾರೆಯೇ ಹೊರತು ಅಧಿಕಾರಿಗಳು ನಿರ್ಲಕ್ಷಿಸುತ್ತಾ ಬಂದಿದ್ದು, ಇದೀಗ ನಾವೂರಿಂದ 3 ಕಿ.ಮಿ ಮತ್ತೆ ಮರು ಡಾಮರೀಕರಣದ ಕಾಮಗಾರಿ ಆರಂಭಿಸಿದ್ದು ಈ ಸಂದರ್ಭದಲ್ಲಿ ಮುರ ಸೇತುವೆ ಬಳಿ ಸುರಕ್ಷಿತ ವ್ಯವಸ್ಥೆ ಕಲ್ಪಿಸದೆ ಮರುಡಾಮರೀಕರಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದು ನಾವೂರು ಹಿತರಕ್ಷಣಾ ವೇದಿಕೆ ವತಿಯಿಂದ ಅಧ್ಯಕ್ಷ ಸಾದಿಕ್ ನಾವೂರು ಇವರ ನೇತೃತ್ವದಲ್ಲಿ ಡಾಮರೀಕರಣದ ವಾಹನವನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ(AEE) ಎಇಇ ಬಕಪ್ಪ ಹಾಗೂ ಸಹಾಯಕ ಇಂಜಿನಿಯರ್ ಶಿವಕುಮಾರ್ ರವರು ಮನವಿಗೆ ಸ್ಪಂದಿಸಿ ಸಮಸ್ಯೆ ಇರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಸಮಸ್ಯೆ ಬಗ್ಗೆ ಅರಿವಾಗಿದ್ದು ಬಿರುಕುಗೊಂಡ ಸ್ಥಳದ ಅಸುಪಾಸಿನಲ್ಲಿ 50 ಮೀಟರ್ ವರೆಗೆ ಕೆಲಸವನ್ನು ಸ್ಥಗಿತಗೊಳಿಸುವುದಾಗಿಯೂ ಬಿರುಕುಗೊಂಡ ಮೋರಿಯನ್ನು ಬದಲಿಸಿ ಸಮಸ್ಯೆ ಪರಿಹಾರಗೊಳಿಸಿದ ನಂತರ ಡಾಮರೀಕರಣ ಮಾಡುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸಲೀಮ್ ಮುರ, ಬದ್ರು ದೇರ್ಲಕ್ಕಿ, ಖಾದರ್ ನಾವೂರು, ದಾಸನ್ನ ಶೆಟ್ಟಿ ಮುರ, ಸಾದಿಕ್ ಕಿರ್ನಡ್ಕ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಸಿ. ಎಂ, ಇರ್ಷಾದ್, ಬಶೀರ್ ಕಳಸಾ, ಹಂಝ ಕಿರ್ನಡ್ಕ, ಇಕ್ಬಾಲ್ ಮುರ, ಇರ್ಫಾನ್ ನಾವೂರು, ಆದಂ ಕೈಕಂಬ, ಇಸ್ಮಾಯಿಲ್ ದೇರ್ಲಕ್ಕಿ, ರಮ್ಲಾ ಇಂದಬೆಟ್ಟು, ಮನ್ಸೂರ್ ದುಗಲಚ್ಚಿಲ್ ಮುಂತಾದವರು ಉಪಸ್ಥಿತರಿದ್ದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya
error: Content is protected !!