July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಸಮತ ಹೊಟೇಲ್ ಮಾಲಕ ಬಿಜೆಪಿಯ ಹಿರಿಯ ಕಾರ್ಯಕರ್ತ ಬಿ. ವಿಠಲ್ ಭಟ್ ರವರಿಗೆ ನುಡಿನಮನ ಹಾಗೂ ಮಿತ್ರ ಭೋಜನ ಕಾರ್ಯಕ್ರಮವು ಎ.1 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಶಾಸಕ ಹರೀಶ್ ಪೂಂಜ, ವೆಂಕಟ್ರಾಯ ಅಡೂರು, ವಿಠಲ್ ಶೆಟ್ಟಿ ನುಡಿ ನಮನದ ಮಾತುಗಳ್ನಾಡಿದರು. ವಿಠಲ ಭಟ್ರ ಹಿರಿಯ ಪುತ್ರಿ ಮನೆಯವರ ಪರವಾಗಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಡಿ ಸಿ ಸಿ ನಿರ್ದೇಶಕರು ಕುಶಾಲಪ್ಪ ಗೌಡ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್, ನಗರ ಪಂಚಾಯತಿನ ಅಧ್ಯಕ್ಷ ಜಯಾನಂದ ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ , ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಶೆಟ್ಟಿ , ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರು ಗಣೇಶ್ ನಾವೂರು, ಪಕ್ಷದ ಪ್ರಮುಖರು ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.

ಸದಾನಂದ ಪೂಜಾರಿ ಉಂಗಿಲಬೈಲು ಸ್ವಾಗತಿಸಿ, ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ಸಂಯೋಜನೆ ಮಾಡಿದರು.

ಪುತ್ತೂರು ಜಿಲ್ಲಾ ಸಂಘ ಚಾಲಕ್ ವಿನಯ ಚಂದ್ರ ಉಜಿರೆ ಅವರ ಕುಟುಂಬದವರು ಮನೆಯವರು ಬಂಧು ಬಳಗದವರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!