22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

ಕಲ್ಮಂಜ : ಸ.ಹಿ ಪ್ರಾ ಶಾಲೆ ಸಿದ್ದಬೈಲು ಪರಾರಿಯಲ್ಲಿ ಕಳೆದ 9 ವರ್ಷಗಳಿಂದ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದ ಶಿಕ್ಷಕ ಕವಿ ಕಲಾವಿದ ಶಂಕರ ಎನ್ ತಾಮನ್ಕರ್ ಇವರ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವು ಮಾ. 29 ರಂದು ಸಿದ್ದಬೈಲು ಶಾಲೆಯಲ್ಲಿ ವಿಜ್ರಂಭಣೆಯಿಂದ ಜರುಗಿತು.

ಏಳನೇ ತರಗತಿ ವಿದ್ಯಾರ್ಥಿಗಳ ವಿದಾಯ ಕೂಟವೂ ಇದರೊಂದಿಗೆ ಜರುಗಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ ಗೌಡ ,ಎಸ್ ಡಿ ಎಂ ಸಿ ಯ ಎಲ್ಲಾ ಸದಸ್ಯರು, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಧರ್ಣಮ್ಮ ,ಊರವರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು, ಸಹ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅವರನ್ನು ಅಭಿನಂದಿಸಿ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಮಕ್ಕಳೇ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶ್ರಿಮತಿ ಧರ್ಣಮ್ಮ, ಮಮತಾ ಮತ್ತು ವಿದ್ಯಾರ್ಥಿಗಳು ಅಭಿನಂದನಾ ಭಾಷಣ ಮಾಡಿದರು. ನಂತರ ವಿದ್ಯಾರ್ಥಿಗಳಿಂದ ಮನೋರಂಜನೆ ಕಾರ್ಯಕ್ರಮ ನಡೆಯಿತು.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!