April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

ಬೆಳ್ತಂಗಡಿ: ಕಿಲ್ಲೂರು ಮುಖ್ಯ ರಸ್ತೆಯ ಮಧ್ಯೆ, ನಾವೂರು ಗ್ರಾಮದ ಮುರ ಎಂಬಲ್ಲಿನ ಸೇತುವೆ ಬಿರುಕು, ಸೇತುವೆಯ ಎರಡು ಕಡೆ ಸುರಕ್ಷತೆ ಗೋಡೆ ಇಲ್ಲದೆ ಅಪಘಾತಗಳು ನಿರಂತರವಾಗಿ ನಡೆಯುತ್ತಿದ್ದು ವರ್ಷಗಳಾದರೂ ಯಾವುದೇ ವ್ಯವಸ್ಥಿತ ಪರಿಹಾರ ಆಗಿಲ್ಲ. ಸುಮಾರು ವರ್ಷಗಳಿಂದ ಎಸ್ ಡಿ ಪಿ ಐ ನಾವೂರು ವತಿಯಿಂದ ಶಾಶ್ವತ ಪರಿಹಾರ, ಸುರಕ್ಷಿತ ತಡೆ ಗೋಡೆ, ಸೇತುವೆಯ ಅಗಲೀಕರಣಕ್ಕೆ ಮನವಿ ನೀಡುತ್ತಾ ಬಂದಿದೆ. ಭರವಸೆ ನೀಡುತ್ತಾರೆಯೇ ಹೊರತು ಅಧಿಕಾರಿಗಳು ನಿರ್ಲಕ್ಷಿಸುತ್ತಾ ಬಂದಿದ್ದು, ಇದೀಗ ನಾವೂರಿಂದ 3 ಕಿ.ಮಿ ಮತ್ತೆ ಮರು ಡಾಮರೀಕರಣದ ಕಾಮಗಾರಿ ಆರಂಭಿಸಿದ್ದು ಈ ಸಂದರ್ಭದಲ್ಲಿ ಮುರ ಸೇತುವೆ ಬಳಿ ಸುರಕ್ಷಿತ ವ್ಯವಸ್ಥೆ ಕಲ್ಪಿಸದೆ ಮರುಡಾಮರೀಕರಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದು ನಾವೂರು ಹಿತರಕ್ಷಣಾ ವೇದಿಕೆ ವತಿಯಿಂದ ಅಧ್ಯಕ್ಷ ಸಾದಿಕ್ ನಾವೂರು ಇವರ ನೇತೃತ್ವದಲ್ಲಿ ಡಾಮರೀಕರಣದ ವಾಹನವನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ(AEE) ಎಇಇ ಬಕಪ್ಪ ಹಾಗೂ ಸಹಾಯಕ ಇಂಜಿನಿಯರ್ ಶಿವಕುಮಾರ್ ರವರು ಮನವಿಗೆ ಸ್ಪಂದಿಸಿ ಸಮಸ್ಯೆ ಇರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಸಮಸ್ಯೆ ಬಗ್ಗೆ ಅರಿವಾಗಿದ್ದು ಬಿರುಕುಗೊಂಡ ಸ್ಥಳದ ಅಸುಪಾಸಿನಲ್ಲಿ 50 ಮೀಟರ್ ವರೆಗೆ ಕೆಲಸವನ್ನು ಸ್ಥಗಿತಗೊಳಿಸುವುದಾಗಿಯೂ ಬಿರುಕುಗೊಂಡ ಮೋರಿಯನ್ನು ಬದಲಿಸಿ ಸಮಸ್ಯೆ ಪರಿಹಾರಗೊಳಿಸಿದ ನಂತರ ಡಾಮರೀಕರಣ ಮಾಡುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸಲೀಮ್ ಮುರ, ಬದ್ರು ದೇರ್ಲಕ್ಕಿ, ಖಾದರ್ ನಾವೂರು, ದಾಸನ್ನ ಶೆಟ್ಟಿ ಮುರ, ಸಾದಿಕ್ ಕಿರ್ನಡ್ಕ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಸಿ. ಎಂ, ಇರ್ಷಾದ್, ಬಶೀರ್ ಕಳಸಾ, ಹಂಝ ಕಿರ್ನಡ್ಕ, ಇಕ್ಬಾಲ್ ಮುರ, ಇರ್ಫಾನ್ ನಾವೂರು, ಆದಂ ಕೈಕಂಬ, ಇಸ್ಮಾಯಿಲ್ ದೇರ್ಲಕ್ಕಿ, ರಮ್ಲಾ ಇಂದಬೆಟ್ಟು, ಮನ್ಸೂರ್ ದುಗಲಚ್ಚಿಲ್ ಮುಂತಾದವರು ಉಪಸ್ಥಿತರಿದ್ದರು.

Related posts

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya
error: Content is protected !!