38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

ಬೆಳ್ತಂಗಡಿ: ಕಿಲ್ಲೂರು ಮುಖ್ಯ ರಸ್ತೆಯ ಮಧ್ಯೆ, ನಾವೂರು ಗ್ರಾಮದ ಮುರ ಎಂಬಲ್ಲಿನ ಸೇತುವೆ ಬಿರುಕು, ಸೇತುವೆಯ ಎರಡು ಕಡೆ ಸುರಕ್ಷತೆ ಗೋಡೆ ಇಲ್ಲದೆ ಅಪಘಾತಗಳು ನಿರಂತರವಾಗಿ ನಡೆಯುತ್ತಿದ್ದು ವರ್ಷಗಳಾದರೂ ಯಾವುದೇ ವ್ಯವಸ್ಥಿತ ಪರಿಹಾರ ಆಗಿಲ್ಲ. ಸುಮಾರು ವರ್ಷಗಳಿಂದ ಎಸ್ ಡಿ ಪಿ ಐ ನಾವೂರು ವತಿಯಿಂದ ಶಾಶ್ವತ ಪರಿಹಾರ, ಸುರಕ್ಷಿತ ತಡೆ ಗೋಡೆ, ಸೇತುವೆಯ ಅಗಲೀಕರಣಕ್ಕೆ ಮನವಿ ನೀಡುತ್ತಾ ಬಂದಿದೆ. ಭರವಸೆ ನೀಡುತ್ತಾರೆಯೇ ಹೊರತು ಅಧಿಕಾರಿಗಳು ನಿರ್ಲಕ್ಷಿಸುತ್ತಾ ಬಂದಿದ್ದು, ಇದೀಗ ನಾವೂರಿಂದ 3 ಕಿ.ಮಿ ಮತ್ತೆ ಮರು ಡಾಮರೀಕರಣದ ಕಾಮಗಾರಿ ಆರಂಭಿಸಿದ್ದು ಈ ಸಂದರ್ಭದಲ್ಲಿ ಮುರ ಸೇತುವೆ ಬಳಿ ಸುರಕ್ಷಿತ ವ್ಯವಸ್ಥೆ ಕಲ್ಪಿಸದೆ ಮರುಡಾಮರೀಕರಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದು ನಾವೂರು ಹಿತರಕ್ಷಣಾ ವೇದಿಕೆ ವತಿಯಿಂದ ಅಧ್ಯಕ್ಷ ಸಾದಿಕ್ ನಾವೂರು ಇವರ ನೇತೃತ್ವದಲ್ಲಿ ಡಾಮರೀಕರಣದ ವಾಹನವನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ(AEE) ಎಇಇ ಬಕಪ್ಪ ಹಾಗೂ ಸಹಾಯಕ ಇಂಜಿನಿಯರ್ ಶಿವಕುಮಾರ್ ರವರು ಮನವಿಗೆ ಸ್ಪಂದಿಸಿ ಸಮಸ್ಯೆ ಇರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಸಮಸ್ಯೆ ಬಗ್ಗೆ ಅರಿವಾಗಿದ್ದು ಬಿರುಕುಗೊಂಡ ಸ್ಥಳದ ಅಸುಪಾಸಿನಲ್ಲಿ 50 ಮೀಟರ್ ವರೆಗೆ ಕೆಲಸವನ್ನು ಸ್ಥಗಿತಗೊಳಿಸುವುದಾಗಿಯೂ ಬಿರುಕುಗೊಂಡ ಮೋರಿಯನ್ನು ಬದಲಿಸಿ ಸಮಸ್ಯೆ ಪರಿಹಾರಗೊಳಿಸಿದ ನಂತರ ಡಾಮರೀಕರಣ ಮಾಡುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸಲೀಮ್ ಮುರ, ಬದ್ರು ದೇರ್ಲಕ್ಕಿ, ಖಾದರ್ ನಾವೂರು, ದಾಸನ್ನ ಶೆಟ್ಟಿ ಮುರ, ಸಾದಿಕ್ ಕಿರ್ನಡ್ಕ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಸಿ. ಎಂ, ಇರ್ಷಾದ್, ಬಶೀರ್ ಕಳಸಾ, ಹಂಝ ಕಿರ್ನಡ್ಕ, ಇಕ್ಬಾಲ್ ಮುರ, ಇರ್ಫಾನ್ ನಾವೂರು, ಆದಂ ಕೈಕಂಬ, ಇಸ್ಮಾಯಿಲ್ ದೇರ್ಲಕ್ಕಿ, ರಮ್ಲಾ ಇಂದಬೆಟ್ಟು, ಮನ್ಸೂರ್ ದುಗಲಚ್ಚಿಲ್ ಮುಂತಾದವರು ಉಪಸ್ಥಿತರಿದ್ದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!