27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 4 ದಿನದ ಬೇಸಿಗೆ ಶಿಬಿರ ಹಾಗೂ ಕ್ರೀಡಾ ಶಿಬಿರದ ಉದ್ಘಾಟನೆಯು ಎ.1ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರೇಶ್ಮಾ ರಜತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಧ್ಯಾನ ಹಾಗೂ ಯೋಗದ ಮಹತ್ವವನ್ನು ತಿಳಿಸಿ, ಒತ್ತಡ ನಿಯಂತ್ರಣದ ಬಗ್ಗೆ ತರಬೇತಿ ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಯೋಗ, ಕ್ರೀಡೆ ಹಾಗೂ ಕರಕುಶಲ ವಸ್ತುಗಳ ತಯಾರಿಕೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು‌ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು. ಹತ್ತು ದಿನಗಳ ಕಾಲ ನಡೆಯಲಿರುವ ಕ್ರೀಡಾ ಶಿಬಿರದಲ್ಲಿ ದೈಹಿಕ ಶಿಕ್ಷಕ ಪ್ರವೀಣ್ ಗರ್ಡಾಡಿ ತರಬೇತಿ ನೀಡಲಿದ್ದಾರೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!