22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 4 ದಿನದ ಬೇಸಿಗೆ ಶಿಬಿರ ಹಾಗೂ ಕ್ರೀಡಾ ಶಿಬಿರದ ಉದ್ಘಾಟನೆಯು ಎ.1ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರೇಶ್ಮಾ ರಜತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಧ್ಯಾನ ಹಾಗೂ ಯೋಗದ ಮಹತ್ವವನ್ನು ತಿಳಿಸಿ, ಒತ್ತಡ ನಿಯಂತ್ರಣದ ಬಗ್ಗೆ ತರಬೇತಿ ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಯೋಗ, ಕ್ರೀಡೆ ಹಾಗೂ ಕರಕುಶಲ ವಸ್ತುಗಳ ತಯಾರಿಕೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು‌ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು. ಹತ್ತು ದಿನಗಳ ಕಾಲ ನಡೆಯಲಿರುವ ಕ್ರೀಡಾ ಶಿಬಿರದಲ್ಲಿ ದೈಹಿಕ ಶಿಕ್ಷಕ ಪ್ರವೀಣ್ ಗರ್ಡಾಡಿ ತರಬೇತಿ ನೀಡಲಿದ್ದಾರೆ.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!