23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಸಮತ ಹೊಟೇಲ್ ಮಾಲಕ ಬಿಜೆಪಿಯ ಹಿರಿಯ ಕಾರ್ಯಕರ್ತ ಬಿ. ವಿಠಲ್ ಭಟ್ ರವರಿಗೆ ನುಡಿನಮನ ಹಾಗೂ ಮಿತ್ರ ಭೋಜನ ಕಾರ್ಯಕ್ರಮವು ಎ.1 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಶಾಸಕ ಹರೀಶ್ ಪೂಂಜ, ವೆಂಕಟ್ರಾಯ ಅಡೂರು, ವಿಠಲ್ ಶೆಟ್ಟಿ ನುಡಿ ನಮನದ ಮಾತುಗಳ್ನಾಡಿದರು. ವಿಠಲ ಭಟ್ರ ಹಿರಿಯ ಪುತ್ರಿ ಮನೆಯವರ ಪರವಾಗಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಡಿ ಸಿ ಸಿ ನಿರ್ದೇಶಕರು ಕುಶಾಲಪ್ಪ ಗೌಡ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್, ನಗರ ಪಂಚಾಯತಿನ ಅಧ್ಯಕ್ಷ ಜಯಾನಂದ ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ , ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಶೆಟ್ಟಿ , ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರು ಗಣೇಶ್ ನಾವೂರು, ಪಕ್ಷದ ಪ್ರಮುಖರು ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.

ಸದಾನಂದ ಪೂಜಾರಿ ಉಂಗಿಲಬೈಲು ಸ್ವಾಗತಿಸಿ, ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ಸಂಯೋಜನೆ ಮಾಡಿದರು.

ಪುತ್ತೂರು ಜಿಲ್ಲಾ ಸಂಘ ಚಾಲಕ್ ವಿನಯ ಚಂದ್ರ ಉಜಿರೆ ಅವರ ಕುಟುಂಬದವರು ಮನೆಯವರು ಬಂಧು ಬಳಗದವರು ಉಪಸ್ಥಿತರಿದ್ದರು.

Related posts

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya
error: Content is protected !!